<p><strong>ಕಲಬುರ್ಗಿ: </strong>ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ತಿಳಿಸಿದರು.</p>.<p>ರಸ್ತೆ, ಕುಡಿಯುವ ನೀರು, ಆರೋಗ್ಯ ಸೇವೆ ವಿಷಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ ಎಂದುನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಕ್ಲಿಷ್ಟಕರ ಸನ್ನಿವೇಶವಿದೆ. ಕೋವಿಡ್ ಹಾಗೂ ಪ್ರವಾಹದಿಂದ ಜನ ಕಂಗೆಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ ಕೆಲ ಹಳ್ಳಿಗಳಲ್ಲಿ ಇಂದಿಗೂ ಕುಡಿಯುವ ನೀರು ಸಿಗುತ್ತಿಲ್ಲ. ಉತ್ತಮ ರಸ್ತೆಗಳಿಲ್ಲ. ಇಲ್ಲಿನ ಜನಪ್ರತಿನಿಧಿಗಳು ಬದ್ಧತೆ ತೋರುತ್ತಿಲ್ಲ. ಜಲಾಶಯಗಳ ಸದ್ಬಳಕೆ ಆಗುತ್ತಿಲ್ಲ ಎಂದು ದೂರಿದರು.</p>.<p>ಈ ಭಾಗದಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ನಗರದ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಎಲ್ಲ ಸೌಲಭ್ಯ ಸಿಗುವಂತಾಗಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p class="Subhead">ಎನ್.ಮಹೇಶ್ ರಾಜೀನಾಮೆ ನೀಡಲಿ: ಬಹುಜನ ಸಮಾಜ ಪಕ್ಷದಿಂದ ಗೆದ್ದು ಶಾಸಕರಾಗಿ, ಇದೀಗ ಬಿಜೆಪಿ ಸೇರುತ್ತಿರುವ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರಿಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಯಿಂದ ಗೆದ್ದು ಬರಲಿ ಎಂದು ಎಂ.ಕೃಷ್ಣಮೂರ್ತಿ ಸವಾಲು ಹಾಕಿದರು.</p>.<p>ಪಕ್ಷವನ್ನು ಯಾರಾದರೂ ತೊರೆದ ಸಂದರ್ಭದಲ್ಲಿ, ‘ಕಸ, ಕಸದ ಬುಟ್ಟಿಗೆ ಸೇರಿತು’ ಎಂದು ಪಕ್ಷದ ಸಂಸ್ಥಾಪಕ ಕಾನ್ಶಿರಾಂ ಅವರು ಹೇಳುತ್ತಿದ್ದರು. ಮಹೇಶ್ ಅವರು ಈ ಮಾತುಗಳನ್ನು ಹೆಚ್ಚು ಬಳಸುತ್ತಿದ್ದರು. ಈಗ ಅವರೇ ಈ ಮಾತಿಗೆ ಉದಾಹರಣೆಯಾಗಿರುವುದು ದುರಂತ’ ಎಂದು ಅವರು ಟೀಕಿಸಿದರು.</p>.<p>ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎ.ಬಿ.ವಾಸುದೇವ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮುನಿಯಪ್ಪ, ಮಹಾದೇವ ಧನ್ನಿ, ಜಿಲ್ಲಾ ಘಟಕದ ಸಂಯೋಜಕ ಕೆ.ಎಂ.ಪ್ರಕಾಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ತಿಳಿಸಿದರು.</p>.<p>ರಸ್ತೆ, ಕುಡಿಯುವ ನೀರು, ಆರೋಗ್ಯ ಸೇವೆ ವಿಷಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ ಎಂದುನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ರಾಜ್ಯದಲ್ಲಿ ಕ್ಲಿಷ್ಟಕರ ಸನ್ನಿವೇಶವಿದೆ. ಕೋವಿಡ್ ಹಾಗೂ ಪ್ರವಾಹದಿಂದ ಜನ ಕಂಗೆಟ್ಟಿದ್ದಾರೆ. ಕಲ್ಯಾಣ ಕರ್ನಾಟಕದ ಕೆಲ ಹಳ್ಳಿಗಳಲ್ಲಿ ಇಂದಿಗೂ ಕುಡಿಯುವ ನೀರು ಸಿಗುತ್ತಿಲ್ಲ. ಉತ್ತಮ ರಸ್ತೆಗಳಿಲ್ಲ. ಇಲ್ಲಿನ ಜನಪ್ರತಿನಿಧಿಗಳು ಬದ್ಧತೆ ತೋರುತ್ತಿಲ್ಲ. ಜಲಾಶಯಗಳ ಸದ್ಬಳಕೆ ಆಗುತ್ತಿಲ್ಲ ಎಂದು ದೂರಿದರು.</p>.<p>ಈ ಭಾಗದಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ನಗರದ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಎಲ್ಲ ಸೌಲಭ್ಯ ಸಿಗುವಂತಾಗಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p class="Subhead">ಎನ್.ಮಹೇಶ್ ರಾಜೀನಾಮೆ ನೀಡಲಿ: ಬಹುಜನ ಸಮಾಜ ಪಕ್ಷದಿಂದ ಗೆದ್ದು ಶಾಸಕರಾಗಿ, ಇದೀಗ ಬಿಜೆಪಿ ಸೇರುತ್ತಿರುವ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರಿಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಯಿಂದ ಗೆದ್ದು ಬರಲಿ ಎಂದು ಎಂ.ಕೃಷ್ಣಮೂರ್ತಿ ಸವಾಲು ಹಾಕಿದರು.</p>.<p>ಪಕ್ಷವನ್ನು ಯಾರಾದರೂ ತೊರೆದ ಸಂದರ್ಭದಲ್ಲಿ, ‘ಕಸ, ಕಸದ ಬುಟ್ಟಿಗೆ ಸೇರಿತು’ ಎಂದು ಪಕ್ಷದ ಸಂಸ್ಥಾಪಕ ಕಾನ್ಶಿರಾಂ ಅವರು ಹೇಳುತ್ತಿದ್ದರು. ಮಹೇಶ್ ಅವರು ಈ ಮಾತುಗಳನ್ನು ಹೆಚ್ಚು ಬಳಸುತ್ತಿದ್ದರು. ಈಗ ಅವರೇ ಈ ಮಾತಿಗೆ ಉದಾಹರಣೆಯಾಗಿರುವುದು ದುರಂತ’ ಎಂದು ಅವರು ಟೀಕಿಸಿದರು.</p>.<p>ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಎ.ಬಿ.ವಾಸುದೇವ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮುನಿಯಪ್ಪ, ಮಹಾದೇವ ಧನ್ನಿ, ಜಿಲ್ಲಾ ಘಟಕದ ಸಂಯೋಜಕ ಕೆ.ಎಂ.ಪ್ರಕಾಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>