ಈ ಬಗ್ಗೆ ಪ್ರಕಟನೆ ನೀಡಿರುವ ಅವರು, ‘ಪೂರ್ವ ಸಿದ್ಧತಾ ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಸಿದ್ಧ ಮಾಡಲಾಗುತ್ತದೆ. ಯಾವ ರೀತಿ ಪರೀಕ್ಷೆಗಳನ್ನು ಬರೆಯಬೇಕು, ಉತ್ತರ ಪತ್ರಿಕೆಯ ಮೊದಲ ಪುಟವನ್ನು ಯಾವ ರೀತಿ ಭರ್ತಿ ಮಾಡಬೇಕು ಎಂಬುವುದನ್ನು ಪೂರ್ವಸಿದ್ಧತಾ ಪರೀಕ್ಷೆಯ ವೇಳೆಯೇ ಕಲಿಸಿ ಕೊಡಲಾಗುತ್ತದೆ. ಅದಕ್ಕಾಗಿ ಸರ್ಕಾರವೇ ಉತ್ತರ ಪತ್ರಿಕೆಗಳನ್ನು ಸರಬರಾಜು ಮಾಡಬೇಕಾಗುತ್ತದೆ. ಹೀಗಿರುವಾಗ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕು ಎಂಬ ನಿಲುವು ಅವೈಜ್ಞಾನಿಕ’ ಎಂದಿದ್ದಾರೆ.