ಕಲಬುರ್ಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ತಾಂಡಾ ಬಳಿ ಹಳ್ಳ ದಾಟಲು ಹೋದ ಶಾಂತಾಬಾಯಿ ಹೊಬು ರಾಠೋಡ (40) ಎಂಬ ಮಹಿಳೆ ಮುಳುಗಿ ಸಾವಿಗೀಡಾಗಿದ್ದಾರೆ.
ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿದ್ದ ಮಹಿಳೆ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಹಳ್ಳದ ದಡದ ಮರದ ಕೊಂಬೆಯಲ್ಲಿ ಸೋಮವಾರ ಬೆಳಿಗ್ಗೆ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರವಷ್ಟೇ ಜಿಲ್ಲೆಯ ಶಹಾಬಾದ್ ನ ಅಜನಿ ಹಳ್ಳದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿದ್ದರು.