<p><strong>ಕಲಬುರಗಿ</strong>: ‘ಬ್ಯಾಂಕಿಂಗ್, ಹಣಕಾಸು, ವಿಮಾ ಕ್ಷೇತ್ರಗಳಲ್ಲಿನ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗೆ ಸಂಬಂಧಿಸಿದಂತೆ ಬ್ರೆಟ್ ಸಲ್ಯೂಷನ್ಸ್ ಸಂಸ್ಥೆಯು ಫೆಬ್ರುವರಿ 22 ಹಾಗೂ 23ರಂದು ನಗರದ ಅಮರತೀರ್ಥ ವಾಣಿಜ್ಯ ಸಂಕೀರ್ಣದಲ್ಲಿ ಉಚಿತ ಕಾರ್ಯಾಗಾರ ಆಯೋಜಿಸಿದೆ’ ಎಂದು ಬ್ರೆಟ್ ಸಲ್ಯೂಷನ್ಸ್ ಸಂಸ್ಥೆಯ ಅಧ್ಯಕ್ಷ ಅಶೋಕ ಹೆಗ್ಡೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಸಕ್ತರು ಮೊ.ಸಂ: 72059028983, 72059028989 ಹಾಗೂ 72059028988 ಸಂಪರ್ಕಿಸಬಹುದು. ಈ ಭಾಗದ ಅಭ್ಯರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆಯಬೇಕು’ ಎಂದು ಮನವಿ ಮಾಡಿದರು.</p>.<p>‘ಬ್ಯಾಂಕಿಂಗ್, ಹಣಕಾಸು, ವಿಮಾ ಸಂಬಂಧಿ ಕ್ಷೇತ್ರಗಳಲ್ಲಿನ ನೇಮಕಾತಿ ಪರೀಕ್ಷೆಗಳ ತರಬೇತಿಗೆ ಈ ಭಾಗದವರು ಧಾರವಾಡ, ಬೆಂಗಳೂರು ಹಾಗೂ ಆಂಧ್ರಪ್ರದೇಶಕ್ಕೆ ತೆರಳಬೇಕಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ನಗರದಲ್ಲಿ ಬ್ರೆಟ್ ಸಲ್ಯೂಷನ್ಸ್ನ ಕೇಂದ್ರ ತೆರೆಯಲಾಗುತ್ತಿದೆ. ಕಡಿಮೆ ಶುಲ್ಕದಲ್ಲಿ ಭೌತಿಕ ಹಾಗೂ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು. ಹಿಂದೆ ಈ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರು ಬೋಧನೆ ಮಾಡುವರು’ ಎಂದರು.</p>.<p>ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಂದಕಿಶೋರ, ನಿರ್ದೇಶಕ ಕೃಷ್ಣಮೂರ್ತಿ ಹಾಗೂ ಕೇಶವ ಬಿರಾದಾರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಬ್ಯಾಂಕಿಂಗ್, ಹಣಕಾಸು, ವಿಮಾ ಕ್ಷೇತ್ರಗಳಲ್ಲಿನ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗೆ ಸಂಬಂಧಿಸಿದಂತೆ ಬ್ರೆಟ್ ಸಲ್ಯೂಷನ್ಸ್ ಸಂಸ್ಥೆಯು ಫೆಬ್ರುವರಿ 22 ಹಾಗೂ 23ರಂದು ನಗರದ ಅಮರತೀರ್ಥ ವಾಣಿಜ್ಯ ಸಂಕೀರ್ಣದಲ್ಲಿ ಉಚಿತ ಕಾರ್ಯಾಗಾರ ಆಯೋಜಿಸಿದೆ’ ಎಂದು ಬ್ರೆಟ್ ಸಲ್ಯೂಷನ್ಸ್ ಸಂಸ್ಥೆಯ ಅಧ್ಯಕ್ಷ ಅಶೋಕ ಹೆಗ್ಡೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಸಕ್ತರು ಮೊ.ಸಂ: 72059028983, 72059028989 ಹಾಗೂ 72059028988 ಸಂಪರ್ಕಿಸಬಹುದು. ಈ ಭಾಗದ ಅಭ್ಯರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆಯಬೇಕು’ ಎಂದು ಮನವಿ ಮಾಡಿದರು.</p>.<p>‘ಬ್ಯಾಂಕಿಂಗ್, ಹಣಕಾಸು, ವಿಮಾ ಸಂಬಂಧಿ ಕ್ಷೇತ್ರಗಳಲ್ಲಿನ ನೇಮಕಾತಿ ಪರೀಕ್ಷೆಗಳ ತರಬೇತಿಗೆ ಈ ಭಾಗದವರು ಧಾರವಾಡ, ಬೆಂಗಳೂರು ಹಾಗೂ ಆಂಧ್ರಪ್ರದೇಶಕ್ಕೆ ತೆರಳಬೇಕಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ನಗರದಲ್ಲಿ ಬ್ರೆಟ್ ಸಲ್ಯೂಷನ್ಸ್ನ ಕೇಂದ್ರ ತೆರೆಯಲಾಗುತ್ತಿದೆ. ಕಡಿಮೆ ಶುಲ್ಕದಲ್ಲಿ ಭೌತಿಕ ಹಾಗೂ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು. ಹಿಂದೆ ಈ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರು ಬೋಧನೆ ಮಾಡುವರು’ ಎಂದರು.</p>.<p>ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಂದಕಿಶೋರ, ನಿರ್ದೇಶಕ ಕೃಷ್ಣಮೂರ್ತಿ ಹಾಗೂ ಕೇಶವ ಬಿರಾದಾರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>