<h2>ಆಳಂದ (ಕಲಬುರಗಿ): ತಾಲ್ಲೂಕಿನ ರುದ್ರವಾಡಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಶನಿವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</h2>.<h2>ಉದ್ಯೋಗ ಖಾತ್ರಿಯ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸೂರ್ಯಕಾಂತ ಕಲ್ಯಾಣಿ ಪಂಚಾಳ (42) ಏಕಾಏಕಿ ಪ್ರಜ್ಞೆ ತಪ್ಪಿ ಕುಸಿದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟಿದ್ದಾರೆ ದೃಢಪಡಿಸಿದರು.</h2>.<h2>ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸಂಜಯ ರೆಡ್ಡಿ, ಅಧಿಕಾರಿಗಳಾದ ಪ್ರವೀಣ, ಸಂತೋಷ ಹತ್ತರಕಿ ಭೇಟಿ ನೀಡಿ, ಪರಿಶೀಲಿಸಿದರು.</h2>.<h2>ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</h2>.<h2>ಪಿಡಿಒ ಸುನೀಲಕುಮಾರ ರಟಕಲ, ಪ್ರಭಾಕರ ಪುಲಾರೆ, ಸುನೀಲಕುಮಾರ, ಸುಧಾಕರ ಜಮದಾರ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</h2>.<p>ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಶೀಲಕುಮಾರ್ ಅಂಬುರೆ, ‘ಬಿಸಿಲಿನಿಂದ ಮೃತಪಟ್ಟಿದ್ದರೆ ಸ್ಥಳದಲ್ಲಿರುವ ನಮ್ಮ ವೈದ್ಯಕೀಯ ಸಿಬ್ಬಂದಿ ಮಾಹಿತಿ ನೀಡುತ್ತಿದ್ದರು. ಸಹಜ ಸಾವು ಆಗಿದ್ದರಿಂದ ಮಾಹಿತಿ ನೀಡಿರಲಿಕ್ಕಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ಆಳಂದ (ಕಲಬುರಗಿ): ತಾಲ್ಲೂಕಿನ ರುದ್ರವಾಡಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಶನಿವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</h2>.<h2>ಉದ್ಯೋಗ ಖಾತ್ರಿಯ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಸೂರ್ಯಕಾಂತ ಕಲ್ಯಾಣಿ ಪಂಚಾಳ (42) ಏಕಾಏಕಿ ಪ್ರಜ್ಞೆ ತಪ್ಪಿ ಕುಸಿದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟಿದ್ದಾರೆ ದೃಢಪಡಿಸಿದರು.</h2>.<h2>ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸಂಜಯ ರೆಡ್ಡಿ, ಅಧಿಕಾರಿಗಳಾದ ಪ್ರವೀಣ, ಸಂತೋಷ ಹತ್ತರಕಿ ಭೇಟಿ ನೀಡಿ, ಪರಿಶೀಲಿಸಿದರು.</h2>.<h2>ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</h2>.<h2>ಪಿಡಿಒ ಸುನೀಲಕುಮಾರ ರಟಕಲ, ಪ್ರಭಾಕರ ಪುಲಾರೆ, ಸುನೀಲಕುಮಾರ, ಸುಧಾಕರ ಜಮದಾರ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</h2>.<p>ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಶೀಲಕುಮಾರ್ ಅಂಬುರೆ, ‘ಬಿಸಿಲಿನಿಂದ ಮೃತಪಟ್ಟಿದ್ದರೆ ಸ್ಥಳದಲ್ಲಿರುವ ನಮ್ಮ ವೈದ್ಯಕೀಯ ಸಿಬ್ಬಂದಿ ಮಾಹಿತಿ ನೀಡುತ್ತಿದ್ದರು. ಸಹಜ ಸಾವು ಆಗಿದ್ದರಿಂದ ಮಾಹಿತಿ ನೀಡಿರಲಿಕ್ಕಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>