ಬಳಿಕ ಆಕಳು, ಎಳೆಕರುವನ್ನು ಆಸ್ಪತ್ರೆಗೆ ಕರೆ ತಂದ ವೈದ್ಯಾಧಿಕಾರಿಗಳು ಪ್ರಥಮ ಚಿಕಿತ್ಸೆ ನೀಡಿ ನೀರು, ಮೇವು ಹಾಕಿ ಆಶ್ರಯ ಕಲ್ಪಿಸಿದರು. ಸಾಮಾಜಿಕ ಜಾಲತಣಗಳ ಮೂಲಕ ಈ ಸುದ್ದಿ ಎಲ್ಲೆಡೆ ಹರಿದಾಡಿದರೂ ಸಂಬಂಧಪಟ್ಟ ಯಾರೊಬ್ಬರು ಸಮೀಪಕ್ಕೆ ಬರಲಿಲ್ಲ. ಈ ನಡುವೆ ಕರುವನ್ನು ಅಲ್ಲೇ ಬಿಟ್ಟು ಆಕಳು ಬೇರೆಡೆ ಓಡಿಹೋಗಿದ್ದರಿಂದ ಹುಡುಕಾಡಲು ವೈದ್ಯರಿಗೆ ಬಿಸಿಲಿನ ಕಾವು ತಟ್ಟಿಸಿತು.