<p><strong>ಕಲಬುರಗಿ</strong>: ‘ಜೀವನದಲ್ಲಿ ಮುಂದೆ ಸಾಗಲು ನಮಗೆ ಪುಸ್ತಕಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಬದುಕು ರೂಪಿಸಿಕೊಳ್ಳಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಸಾಹಿತ್ಯ ಅಕಾಡಮಿ ಸದಸ್ಯೆ ಚಂದ್ರಕಲಾ ಬಿದರಿ ಸಲಹೆ ನೀಡಿದರು.</p>.<p>ಎಚ್ಕೆಇ ಸಂಸ್ಥೆಯ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದಿಂದ ಹಮ್ಮಿಕೊಂಡ ಕನ್ನಡ ವ್ಯಾಕರಣ ಹೆಚ್ಚುವರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾನು ನನ್ನ ಜೀವನದಲ್ಲಿ ಕೇವಲ ಹೆಸರಿಗಾಗಿ ಕೆಲಸ ಮಾಡದೆ, ಶ್ರದ್ಧೆ ಮತ್ತು ಪರಿಶ್ರಮದಿಂದ ಕೆಲಸ ಮಾಡಿರುವೆ. ಕೆಲಸದ ಬಗೆಗೆ ನನಗೆ ಇರುವ ಶ್ರದ್ಧೆ ಮತ್ತು ಪರಿಶ್ರಮದಿಂದ ಈ ನಾಡು ನನ್ನನ್ನು ಗುರುತಿಸುವಂತೆ ಮಾಡಿದೆ’ ಎಂದರು.</p>.<p>ಪ್ರಾಚಾರ್ಯ ಆರ್.ಬಿ.ಕೊಂಡಾ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಕವಿತಾ ಅಶೋಕ ಸ್ವಾಗತಿಸಿದರು. ಬಸಮ್ಮ ಗೊಬ್ಬರ ನಿರೂಪಿಸಿದರು. ದಾನಮ್ಮ, ಶಿವಲೀಲಾ ಧೋತ್ರೆ, ಶ್ರೀದೇವಿ ಸರಡಗಿ, ನಾಗರತ್ನ, ಗೀತಾ ಪಾಟೀಲ, ವಿವಿಧ ವಿಭಾಗಗಳ ಉಪನ್ಯಾಸಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಜೀವನದಲ್ಲಿ ಮುಂದೆ ಸಾಗಲು ನಮಗೆ ಪುಸ್ತಕಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಬದುಕು ರೂಪಿಸಿಕೊಳ್ಳಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಸಾಹಿತ್ಯ ಅಕಾಡಮಿ ಸದಸ್ಯೆ ಚಂದ್ರಕಲಾ ಬಿದರಿ ಸಲಹೆ ನೀಡಿದರು.</p>.<p>ಎಚ್ಕೆಇ ಸಂಸ್ಥೆಯ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದಿಂದ ಹಮ್ಮಿಕೊಂಡ ಕನ್ನಡ ವ್ಯಾಕರಣ ಹೆಚ್ಚುವರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಾನು ನನ್ನ ಜೀವನದಲ್ಲಿ ಕೇವಲ ಹೆಸರಿಗಾಗಿ ಕೆಲಸ ಮಾಡದೆ, ಶ್ರದ್ಧೆ ಮತ್ತು ಪರಿಶ್ರಮದಿಂದ ಕೆಲಸ ಮಾಡಿರುವೆ. ಕೆಲಸದ ಬಗೆಗೆ ನನಗೆ ಇರುವ ಶ್ರದ್ಧೆ ಮತ್ತು ಪರಿಶ್ರಮದಿಂದ ಈ ನಾಡು ನನ್ನನ್ನು ಗುರುತಿಸುವಂತೆ ಮಾಡಿದೆ’ ಎಂದರು.</p>.<p>ಪ್ರಾಚಾರ್ಯ ಆರ್.ಬಿ.ಕೊಂಡಾ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಕವಿತಾ ಅಶೋಕ ಸ್ವಾಗತಿಸಿದರು. ಬಸಮ್ಮ ಗೊಬ್ಬರ ನಿರೂಪಿಸಿದರು. ದಾನಮ್ಮ, ಶಿವಲೀಲಾ ಧೋತ್ರೆ, ಶ್ರೀದೇವಿ ಸರಡಗಿ, ನಾಗರತ್ನ, ಗೀತಾ ಪಾಟೀಲ, ವಿವಿಧ ವಿಭಾಗಗಳ ಉಪನ್ಯಾಸಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>