<p><strong>ಕಲಬುರಗಿ: ಪ</strong>ರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ಗೋಕುಲ ನಗರದ ಜಿಡಿಎ ಬಡಾವಣೆ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ‘ಅಮೃತ್ ಮಿತ್ರ’ ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಚಾಲನೆ ನೀಡಿದರು.</p>.<p>ವುಮೆನ್ ಫಾರ್ ಟ್ರೀಸ್ ಘೋಷಣೆಯಡಿ ನಗರದ ಉದ್ಯಾನ ಮತ್ತು ಮೈದಾನಗಳಲ್ಲಿ ಸುಮಾರು 2,000 ಸಸಿಗಳನ್ನು ನೆಡಲಾಗುತ್ತಿದೆ. ಸಸಿಗಳನ್ನು ಡೇ–ನೆಲ್ಮ್ ಯೋಜನೆಯಡಿ ನೋಂದಾಯಿತ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ನೀಡಲಾಗುತ್ತಿದೆ.</p>.<p>ಆಗಸ್ಟ್ 31ರ ಒಳಗೆ ಸಸಿಗಳನ್ನು ನೆಟ್ಟ ವರದಿ ನೀಡಲಿದ್ದಾರೆ. ಮುಂದಿನ 2 ವರ್ಷಗಳವರೆಗೆ ಸಸಿಗಳ ನಿರ್ವಹಣೆಯ ಜವಾಬ್ದಾರಿ ಸಹ ಮಹಿಳಾ ಸದಸ್ಯರಿಗೆ ನೀಡಲಾಗಿದೆ. ನಿರ್ವಹಣಾ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಡಿಬಿಟಿ ಮೂಲಕ ಪಾವತಿ ಆಗುತ್ತದೆ ಎಂದು ಪಾಲಿಕೆ ಹೇಳಿದೆ.</p>.<p>ಕಾರ್ಯಕ್ರಮದಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ರಾಜೇಂದ್ರ ಭಾಲ್ಕಿ, ಎಇಇ (ಪರಿಸರ) ಅಭಯಕುಮಾರ, ವಲಯ ಆಯುಕ್ತ ಪ್ರದೀಪ್ ಉಪಸ್ಥಿತರಿದ್ದರು.</p>.<p class="Subhead">4.43 ಲಕ್ಷ ಸಸಿಗಳ ಗುರಿ: ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 1,060 ಹೆಕ್ಟೇರ್ ಪ್ರದೇಶದಲ್ಲಿ 4.43 ಲಕ್ಷ ಸಸಿಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.</p>.<p>ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಶೇ 10ಕ್ಕಿಂತ ಕಡಿಮೆ ಅರಣ್ಯ ಪ್ರದೇಶವಿದೆ. ಕಲಬುರಗಿಯಲ್ಲಿ ಶೇ 5ರಷ್ಟು ಹಸರೀಕರಣ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದೆ. 2025-26ನೇ ಸಾಲಿನಲ್ಲಿ ಪ್ರಾದೇಶಿಕ ಅರಣ್ಯ ಮತ್ತು ಸಾಮಾಜಿಕ ಅರಣ್ಯ ವಿಭಾಗದಿಂದ 567.50 ಹೆಕ್ಟೇರ್ ಪ್ರದೇಶದಲ್ಲಿ ಬ್ಲಾಕ್ ನೆಡುತೋಪು, 350 ಕಿ.ಮೀ. ರಸ್ತೆ ಬದಿ ನೆಡುತೋಪು ಸೇರಿ 4.43 ಲಕ್ಷ ಸಸಿ ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದಿದೆ.</p>.<p>ಸಾರ್ವಜನಿಕರು, ರೈತರು, ಸಂಘ-ಸಂಸ್ಥೆಗಳಿಗೆ 1.64 ಲಕ್ಷ ಸಸಿಗಳನ್ನು ವಿತರಿಸಲಾಗುವುದು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ಪ</strong>ರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ಗೋಕುಲ ನಗರದ ಜಿಡಿಎ ಬಡಾವಣೆ ಉದ್ಯಾನದಲ್ಲಿ ಸಸಿ ನೆಡುವ ಮೂಲಕ ‘ಅಮೃತ್ ಮಿತ್ರ’ ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಚಾಲನೆ ನೀಡಿದರು.</p>.<p>ವುಮೆನ್ ಫಾರ್ ಟ್ರೀಸ್ ಘೋಷಣೆಯಡಿ ನಗರದ ಉದ್ಯಾನ ಮತ್ತು ಮೈದಾನಗಳಲ್ಲಿ ಸುಮಾರು 2,000 ಸಸಿಗಳನ್ನು ನೆಡಲಾಗುತ್ತಿದೆ. ಸಸಿಗಳನ್ನು ಡೇ–ನೆಲ್ಮ್ ಯೋಜನೆಯಡಿ ನೋಂದಾಯಿತ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ನೀಡಲಾಗುತ್ತಿದೆ.</p>.<p>ಆಗಸ್ಟ್ 31ರ ಒಳಗೆ ಸಸಿಗಳನ್ನು ನೆಟ್ಟ ವರದಿ ನೀಡಲಿದ್ದಾರೆ. ಮುಂದಿನ 2 ವರ್ಷಗಳವರೆಗೆ ಸಸಿಗಳ ನಿರ್ವಹಣೆಯ ಜವಾಬ್ದಾರಿ ಸಹ ಮಹಿಳಾ ಸದಸ್ಯರಿಗೆ ನೀಡಲಾಗಿದೆ. ನಿರ್ವಹಣಾ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಡಿಬಿಟಿ ಮೂಲಕ ಪಾವತಿ ಆಗುತ್ತದೆ ಎಂದು ಪಾಲಿಕೆ ಹೇಳಿದೆ.</p>.<p>ಕಾರ್ಯಕ್ರಮದಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ರಾಜೇಂದ್ರ ಭಾಲ್ಕಿ, ಎಇಇ (ಪರಿಸರ) ಅಭಯಕುಮಾರ, ವಲಯ ಆಯುಕ್ತ ಪ್ರದೀಪ್ ಉಪಸ್ಥಿತರಿದ್ದರು.</p>.<p class="Subhead">4.43 ಲಕ್ಷ ಸಸಿಗಳ ಗುರಿ: ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 1,060 ಹೆಕ್ಟೇರ್ ಪ್ರದೇಶದಲ್ಲಿ 4.43 ಲಕ್ಷ ಸಸಿಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.</p>.<p>ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಶೇ 10ಕ್ಕಿಂತ ಕಡಿಮೆ ಅರಣ್ಯ ಪ್ರದೇಶವಿದೆ. ಕಲಬುರಗಿಯಲ್ಲಿ ಶೇ 5ರಷ್ಟು ಹಸರೀಕರಣ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದೆ. 2025-26ನೇ ಸಾಲಿನಲ್ಲಿ ಪ್ರಾದೇಶಿಕ ಅರಣ್ಯ ಮತ್ತು ಸಾಮಾಜಿಕ ಅರಣ್ಯ ವಿಭಾಗದಿಂದ 567.50 ಹೆಕ್ಟೇರ್ ಪ್ರದೇಶದಲ್ಲಿ ಬ್ಲಾಕ್ ನೆಡುತೋಪು, 350 ಕಿ.ಮೀ. ರಸ್ತೆ ಬದಿ ನೆಡುತೋಪು ಸೇರಿ 4.43 ಲಕ್ಷ ಸಸಿ ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದಿದೆ.</p>.<p>ಸಾರ್ವಜನಿಕರು, ರೈತರು, ಸಂಘ-ಸಂಸ್ಥೆಗಳಿಗೆ 1.64 ಲಕ್ಷ ಸಸಿಗಳನ್ನು ವಿತರಿಸಲಾಗುವುದು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>