<p><strong>ಕಲಬುರ್ಗಿ:</strong> ‘ಭೂಮಿಯಲ್ಲಿ ಒಂದು ಇಂಚು ಮಣ್ಣು ತಯಾರಾಗಲು ಎಂಟು ನೂರರಿಂದ ಒಂದು ಸಾವಿರ ವರ್ಷಗಳು ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮಣ್ಣಿನ ಸಂರಕ್ಷಣೆ ಮಾಡಬೇಕು’ ಎಂದು ಹಿರಿಯ ವಿಜ್ಞಾನಿ ಡಾ.ರಾಜು ತೆಗ್ಗೆಳ್ಳಿ ಹೇಳಿದರು.</p>.<p>ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಮೈರಾಡ್ ಸಂಸ್ಥೆ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಣ್ಣು ದಿನಾಚರಣೆ ಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಮಾತನಾಡಿ, ‘ಬೊಗಸೆ ಮಣ್ಣು ಕೋಟ್ಯಂತರ ಜೀವಿಗಳಿಂದ ಕೂಡಿದ ಹೊನ್ನು ಎಂಬ ಗಾದೆ ಮಾತಿನಂತೆ ಪ್ರತಿಯೊಬ್ಬ ರೈತರು ಮಣ್ಣನ್ನು ಸಂರಕ್ಷಿಸಲು ತಮ್ಮ ಹೊಲಗಳಲ್ಲಿ ಚೆಕ್-ಡ್ಯಾಮ್ಗಳನ್ನು ನಿರ್ಮಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿರಸಗಿ ಅವರು, ರೈತ ಮಹಿಳೆಯರು ಕೃಷಿ ಇಲಾಖೆಯ ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ‘ರೈತರು ರಾಸಾಯನಿಕ ಗೊಬ್ಬರಗಳ ಮೇಲೆ ಅವಲಂಬಿತರಾಗದೇ ಸಾವಯವ ಗೊಬ್ಬರಗಳನ್ನು ಬಳಸಿ ಕೃಷಿ, ತೋಟಗಾರಿಕೆ ಹಾಗೂ ಪಶು ಸಂಗೋಪನೆ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ರತೀಂದ್ರನಾಥ ಸೂಗೂರು ಅವರು, ಕೃಷಿ ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳು ಹಾಗೂ ಮಣ್ಣು ಆರೋಗ್ಯ ಕಾರ್ಡ್ನ ಮಹತ್ವದ ಬಗ್ಗೆ ತಿಳಿಸಿದರು.</p>.<p>ಚಿಂಚೋಳಿ, ಹಾಗರಗಾ, ತೆಲ್ಲೂರು, ಮೇಳಕುಂದಾ (ಬಿ), ಮಹಾಗಾಂವ, ಶ್ರೀನಿವಾಸ ಸರಡಗಿ, ಹಡಗಿಲ ಹಾರುತಿ ಹಾಗೂ ಕಡಗಂಚಿ ಗ್ರಾಮಗಳ 150ಕ್ಕೂ ಹೆಚ್ಚು ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ 10 ರೈತರಿಗೆ ಸಾಂಕೇತಿಕವಾಗಿ ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸಲಾಯಿತು.</p>.<p>ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಜೆ.ಆರ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಸ್ಯರೋಗ ತಜ್ಞ ಡಾ.ಜಹೀರ್ ಅಹಮದ್ ಸ್ವಾಗತಿಸಿದರು. ಪ್ರಾಣಿ ವಿಜ್ಞಾನಿ ಡಾ. ಮಂಜುನಾಥ ಪಾಟೀಲ ನಿರೂಪಿಸಿ, ವಂದಿಸಿದರು.</p>.<p>*<br />ಪ್ರತಿ ಮೂರು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಮಣ್ಣಿನ ಪರೀಕ್ಷೆಯಿಂದ ಮಣ್ಣಿನ ಗುಣಧರ್ಮಗಳನ್ನು ತಿಳಿದುಕೊಳ್ಳಬಹುದು.<br />-<em><strong>ಡಾ.</strong></em> <em><strong>ಜೆ.ಆರ್.ಪಾಟೀಲ, ಸಹ ಸಂಶೋಧನಾ ನಿರ್ದೇಶಕ, ಕೆವಿಕೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಭೂಮಿಯಲ್ಲಿ ಒಂದು ಇಂಚು ಮಣ್ಣು ತಯಾರಾಗಲು ಎಂಟು ನೂರರಿಂದ ಒಂದು ಸಾವಿರ ವರ್ಷಗಳು ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮಣ್ಣಿನ ಸಂರಕ್ಷಣೆ ಮಾಡಬೇಕು’ ಎಂದು ಹಿರಿಯ ವಿಜ್ಞಾನಿ ಡಾ.ರಾಜು ತೆಗ್ಗೆಳ್ಳಿ ಹೇಳಿದರು.</p>.<p>ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಮೈರಾಡ್ ಸಂಸ್ಥೆ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಣ್ಣು ದಿನಾಚರಣೆ ಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಮಾತನಾಡಿ, ‘ಬೊಗಸೆ ಮಣ್ಣು ಕೋಟ್ಯಂತರ ಜೀವಿಗಳಿಂದ ಕೂಡಿದ ಹೊನ್ನು ಎಂಬ ಗಾದೆ ಮಾತಿನಂತೆ ಪ್ರತಿಯೊಬ್ಬ ರೈತರು ಮಣ್ಣನ್ನು ಸಂರಕ್ಷಿಸಲು ತಮ್ಮ ಹೊಲಗಳಲ್ಲಿ ಚೆಕ್-ಡ್ಯಾಮ್ಗಳನ್ನು ನಿರ್ಮಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿರಸಗಿ ಅವರು, ರೈತ ಮಹಿಳೆಯರು ಕೃಷಿ ಇಲಾಖೆಯ ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮಾತನಾಡಿ, ‘ರೈತರು ರಾಸಾಯನಿಕ ಗೊಬ್ಬರಗಳ ಮೇಲೆ ಅವಲಂಬಿತರಾಗದೇ ಸಾವಯವ ಗೊಬ್ಬರಗಳನ್ನು ಬಳಸಿ ಕೃಷಿ, ತೋಟಗಾರಿಕೆ ಹಾಗೂ ಪಶು ಸಂಗೋಪನೆ ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ರತೀಂದ್ರನಾಥ ಸೂಗೂರು ಅವರು, ಕೃಷಿ ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳು ಹಾಗೂ ಮಣ್ಣು ಆರೋಗ್ಯ ಕಾರ್ಡ್ನ ಮಹತ್ವದ ಬಗ್ಗೆ ತಿಳಿಸಿದರು.</p>.<p>ಚಿಂಚೋಳಿ, ಹಾಗರಗಾ, ತೆಲ್ಲೂರು, ಮೇಳಕುಂದಾ (ಬಿ), ಮಹಾಗಾಂವ, ಶ್ರೀನಿವಾಸ ಸರಡಗಿ, ಹಡಗಿಲ ಹಾರುತಿ ಹಾಗೂ ಕಡಗಂಚಿ ಗ್ರಾಮಗಳ 150ಕ್ಕೂ ಹೆಚ್ಚು ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ 10 ರೈತರಿಗೆ ಸಾಂಕೇತಿಕವಾಗಿ ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸಲಾಯಿತು.</p>.<p>ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಜೆ.ಆರ್.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.</p>.<p>ಸಸ್ಯರೋಗ ತಜ್ಞ ಡಾ.ಜಹೀರ್ ಅಹಮದ್ ಸ್ವಾಗತಿಸಿದರು. ಪ್ರಾಣಿ ವಿಜ್ಞಾನಿ ಡಾ. ಮಂಜುನಾಥ ಪಾಟೀಲ ನಿರೂಪಿಸಿ, ವಂದಿಸಿದರು.</p>.<p>*<br />ಪ್ರತಿ ಮೂರು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಮಣ್ಣಿನ ಪರೀಕ್ಷೆಯಿಂದ ಮಣ್ಣಿನ ಗುಣಧರ್ಮಗಳನ್ನು ತಿಳಿದುಕೊಳ್ಳಬಹುದು.<br />-<em><strong>ಡಾ.</strong></em> <em><strong>ಜೆ.ಆರ್.ಪಾಟೀಲ, ಸಹ ಸಂಶೋಧನಾ ನಿರ್ದೇಶಕ, ಕೆವಿಕೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>