<p>ಕೆಂಭಾವಿ: ಜಿಲ್ಲೆಯಾದ್ಯಂತ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, ಬುಧವಾರ ಕೆಂಭಾವಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮನೆಗಳ ಮ್ಯಾಪಿಂಗ್ ಕೆಲಸ ಮುಗಿದಿದೆ. ಮನೆಗಳಿಗೆ ತೆರಳಿ ಗಣತಿದಾರರು ಮಾಹಿತಿ ಪಡೆಯುತ್ತಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದ ಅವರು ಬಿಸಿಲು ಹೆಚ್ಚಾಗಿರುವುದರಿಂದ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಿ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಅವರಿಂದ ಗಣತಿ ಕುರಿತು ಮಾಹಿತಿ ಪಡೆದು, ಅಚ್ಚುಕಟ್ಟಾಗಿ ಗಣತಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.</p>.<p>ಗಣತಿ ಮೇಲ್ವಿಚಾರಕರಾದ ದತ್ತಾತ್ರೆಯ ಕುಲಕರ್ಣಿ, ಶ್ರೀಕಾಂತ, ಬಸವರಾಜ ಬಂಟನೂರ, ಸಿದ್ರಾಮಯ್ಯ ಇಂಡಿ, ಕಾಶಿನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-30-436101009</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ಜಿಲ್ಲೆಯಾದ್ಯಂತ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, ಬುಧವಾರ ಕೆಂಭಾವಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮನೆಗಳ ಮ್ಯಾಪಿಂಗ್ ಕೆಲಸ ಮುಗಿದಿದೆ. ಮನೆಗಳಿಗೆ ತೆರಳಿ ಗಣತಿದಾರರು ಮಾಹಿತಿ ಪಡೆಯುತ್ತಿದ್ದಾರೆ. ಸಾರ್ವಜನಿಕರು ಗಣತಿದಾರರಿಗೆ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದ ಅವರು ಬಿಸಿಲು ಹೆಚ್ಚಾಗಿರುವುದರಿಂದ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಿ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಅವರಿಂದ ಗಣತಿ ಕುರಿತು ಮಾಹಿತಿ ಪಡೆದು, ಅಚ್ಚುಕಟ್ಟಾಗಿ ಗಣತಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.</p>.<p>ಗಣತಿ ಮೇಲ್ವಿಚಾರಕರಾದ ದತ್ತಾತ್ರೆಯ ಕುಲಕರ್ಣಿ, ಶ್ರೀಕಾಂತ, ಬಸವರಾಜ ಬಂಟನೂರ, ಸಿದ್ರಾಮಯ್ಯ ಇಂಡಿ, ಕಾಶಿನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-30-436101009</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>