<p><strong>ಕೆಂಭಾವಿ:</strong> ಪಟ್ಟಣದ ಅರ್ಧ ಪ್ರದೇಶದ ವಿವಿಧ ಬಡಾವಣೆಗಳಿಗೆ ನೀರು ಪೂರೈಸುತ್ತಿರುವ ರೇವಣಸಿದ್ಧೇಶ್ವರ ಬಾವಿ ಸಂಪೂರ್ಣ ಕಲುಷಿತಗೊಂಡು ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.</p>.<p>‘ಪುರಾತನ ಕಾಲದ ಈ ಬಾವಿ ಅನೇಕ ವರ್ಷಗಳಿಂದ ಜನತೆಗೆ ಕುಡಿಯುವ ನೀ ರು ಒದಗಿಸುವ ಮುಖ್ಯ ಸೆಲೆಯಾಗಿದ್ದು, ಕಳೆದ ಹಲವು ತಿಂಗಳಿನಿಂದ ಈ ಬಾವಿ ಪಾಚಿ ತುಂಬಿ ಸುತ್ತಮುತ್ತಲಿನ ಪ್ರದೇಶ ಮಲಿನವಾಗಿದೆ. ಹೀಗಿದ್ದರೂ ಸ್ಥಳಿಯ ಪುರಸಭೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ’ ಎಂದು ಬಡಾವಣೆಯ ನಿವಾಸಿ ವೀರೇಶ ಟಕ್ಕಳಿಕಿ ಆರೋಪಿಸಿದ್ದಾರೆ.</p>.<p>ಕೇವಲ ಜನತೆಯ ಮನೆಗಳಿಗೆ ಮಾತ್ರವಲ್ಲದೆ ಹಳೆ ಬಸ್ ನಿಲ್ದಾಣ ಪ್ರದೇಶದ ಹಲವು ಹೋಟೆಲ್ಗಳಿಗೂ ಈ ಬಾವಿಯ ನೀರೆ ಆಸರೆಯಾಗಿದ್ದು ಶುದ್ಧ ಕುಡಿಯುವ ನೀರು ಒದಗಿಸುವ ಈ ಏಕೈಕ ಬಾವಿ ಇದೀಗ ಪಾಚಿ ತುಂಬಿ ಮಲಿನವಾಗುತ್ತಿದ್ದು ಜನತೆ ಇದೇ ನೀರನ್ನು ತಮ್ಮ ಮನೆಗಳಿಗೆ ಹೊತ್ತೊಯ್ಯುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕೆಲವೆ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಕೂಡಲೆ ಪುರಸಭೆ ಈ ಬಗ್ಗೆ ಗಮನ ಹರಿಸಿ ಬಾವಿ ಸ್ವಚ್ಚಗೊಳಿಸಿ ಜನತೆಗೆ ಅನುಕೂಲ ಕಲ್ಪಿಸಬೇಕೆಂದು ಅಲ್ಲಿನ ಬಡಾವಣೆ ನಿವಾಸಿಗಳ ಆಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1195733163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಪಟ್ಟಣದ ಅರ್ಧ ಪ್ರದೇಶದ ವಿವಿಧ ಬಡಾವಣೆಗಳಿಗೆ ನೀರು ಪೂರೈಸುತ್ತಿರುವ ರೇವಣಸಿದ್ಧೇಶ್ವರ ಬಾವಿ ಸಂಪೂರ್ಣ ಕಲುಷಿತಗೊಂಡು ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.</p>.<p>‘ಪುರಾತನ ಕಾಲದ ಈ ಬಾವಿ ಅನೇಕ ವರ್ಷಗಳಿಂದ ಜನತೆಗೆ ಕುಡಿಯುವ ನೀ ರು ಒದಗಿಸುವ ಮುಖ್ಯ ಸೆಲೆಯಾಗಿದ್ದು, ಕಳೆದ ಹಲವು ತಿಂಗಳಿನಿಂದ ಈ ಬಾವಿ ಪಾಚಿ ತುಂಬಿ ಸುತ್ತಮುತ್ತಲಿನ ಪ್ರದೇಶ ಮಲಿನವಾಗಿದೆ. ಹೀಗಿದ್ದರೂ ಸ್ಥಳಿಯ ಪುರಸಭೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ’ ಎಂದು ಬಡಾವಣೆಯ ನಿವಾಸಿ ವೀರೇಶ ಟಕ್ಕಳಿಕಿ ಆರೋಪಿಸಿದ್ದಾರೆ.</p>.<p>ಕೇವಲ ಜನತೆಯ ಮನೆಗಳಿಗೆ ಮಾತ್ರವಲ್ಲದೆ ಹಳೆ ಬಸ್ ನಿಲ್ದಾಣ ಪ್ರದೇಶದ ಹಲವು ಹೋಟೆಲ್ಗಳಿಗೂ ಈ ಬಾವಿಯ ನೀರೆ ಆಸರೆಯಾಗಿದ್ದು ಶುದ್ಧ ಕುಡಿಯುವ ನೀರು ಒದಗಿಸುವ ಈ ಏಕೈಕ ಬಾವಿ ಇದೀಗ ಪಾಚಿ ತುಂಬಿ ಮಲಿನವಾಗುತ್ತಿದ್ದು ಜನತೆ ಇದೇ ನೀರನ್ನು ತಮ್ಮ ಮನೆಗಳಿಗೆ ಹೊತ್ತೊಯ್ಯುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕೆಲವೆ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಕೂಡಲೆ ಪುರಸಭೆ ಈ ಬಗ್ಗೆ ಗಮನ ಹರಿಸಿ ಬಾವಿ ಸ್ವಚ್ಚಗೊಳಿಸಿ ಜನತೆಗೆ ಅನುಕೂಲ ಕಲ್ಪಿಸಬೇಕೆಂದು ಅಲ್ಲಿನ ಬಡಾವಣೆ ನಿವಾಸಿಗಳ ಆಗ್ರಹವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-30-1195733163</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>