<p>ಯಡ್ರಾಮಿ: ಪಟ್ಟಣ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವುದು, ಬಳಬಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕೆಕೆಆರ್ಟಿಸಿಯ ಜೇವರ್ಗಿ ಬಸ್ ಘಟಕದ ಅಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಈಚೆಗೆ ಮನವಿ ಸಲ್ಲಿಸಿದರು.</p>.<p>ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಅನೇಕ ವರ್ಷಗಳಿಂದ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಒಂದು ವಾರದಲ್ಲಿ ಬಸ್ ನಿಲ್ದಾಣದಲ್ಲಿ ಕ್ಯಾಮೆರಾ ಅಳವಡಿಸದಿಲ್ಲದೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಶಿವಪುರ, ಬಳಬಟ್ಟಿ, ಅಂಬರಖೇಡ, ಮಲ್ಲಾಬಾದ್ ಗ್ರಾಮಗಳಿಗೆ ಬಸ್ ಸೌಲಭ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಯಡ್ರಾಮಿ ಪಟ್ಟಣಕ್ಕೆ ಸರ್ಕಾರಿ ಕೆಲಸಗಳಿಗೆ ಬರಬೇಕಾದರೆ ಇಜೇರಿ ಮೂಲಕವಾಗಿ ಬರಬೇಕಾದ ಸ್ಥಿತಿ ಇದೆ. ಹೀಗಾಗಿ ಯಡ್ರಾಮಿಯಿಂದ ಶಿವಪುರ ಮೂಲಕವಾಗಿ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕ ಗೌರವ ಅಧ್ಯಕ್ಷ ಸಾಂಭವಶಿವ ಎಂ ಹಿರೇಮಠ, ಮುಖಂಡ ಸಾಹೇಬಗೌಡ ದೇಸಾಯಿ, ಗುರಣ್ಣ ದೊಡ್ಡಮನಿ ಕಾಚಾಪುರ, ರೈತ ಹೋರಾಟಗಾರ ಯಲ್ಲಾಲಿಂಗ ಹರನಾಳ, ದೇವಿಂದ್ರ ನಾಯ್ಕೋಡಿ, ಹನುಮಂತ ಕೂಡಗಿ, ಸಯ್ಯದ್ ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-31-681055900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಡ್ರಾಮಿ: ಪಟ್ಟಣ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವುದು, ಬಳಬಟ್ಟಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಕೆಕೆಆರ್ಟಿಸಿಯ ಜೇವರ್ಗಿ ಬಸ್ ಘಟಕದ ಅಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಈಚೆಗೆ ಮನವಿ ಸಲ್ಲಿಸಿದರು.</p>.<p>ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಅನೇಕ ವರ್ಷಗಳಿಂದ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಒಂದು ವಾರದಲ್ಲಿ ಬಸ್ ನಿಲ್ದಾಣದಲ್ಲಿ ಕ್ಯಾಮೆರಾ ಅಳವಡಿಸದಿಲ್ಲದೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕಿನ ಶಿವಪುರ, ಬಳಬಟ್ಟಿ, ಅಂಬರಖೇಡ, ಮಲ್ಲಾಬಾದ್ ಗ್ರಾಮಗಳಿಗೆ ಬಸ್ ಸೌಲಭ್ಯವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ. ಯಡ್ರಾಮಿ ಪಟ್ಟಣಕ್ಕೆ ಸರ್ಕಾರಿ ಕೆಲಸಗಳಿಗೆ ಬರಬೇಕಾದರೆ ಇಜೇರಿ ಮೂಲಕವಾಗಿ ಬರಬೇಕಾದ ಸ್ಥಿತಿ ಇದೆ. ಹೀಗಾಗಿ ಯಡ್ರಾಮಿಯಿಂದ ಶಿವಪುರ ಮೂಲಕವಾಗಿ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕ ಗೌರವ ಅಧ್ಯಕ್ಷ ಸಾಂಭವಶಿವ ಎಂ ಹಿರೇಮಠ, ಮುಖಂಡ ಸಾಹೇಬಗೌಡ ದೇಸಾಯಿ, ಗುರಣ್ಣ ದೊಡ್ಡಮನಿ ಕಾಚಾಪುರ, ರೈತ ಹೋರಾಟಗಾರ ಯಲ್ಲಾಲಿಂಗ ಹರನಾಳ, ದೇವಿಂದ್ರ ನಾಯ್ಕೋಡಿ, ಹನುಮಂತ ಕೂಡಗಿ, ಸಯ್ಯದ್ ಮುಲ್ಲಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-31-681055900</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>