<p>ಯಡ್ರಾಮಿ: ‘ಎಲ್ಲಾ ಧರ್ಮದ ಮುಖಂಡರು ಮತ್ತು ಸಾರ್ವಜನಿಕರು ಒಟ್ಟಾಗಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ಇನ್ಸ್ಪೆಕ್ಟರ್ ವಿಶ್ವನಾಥ್ ಎಂ.ಮುದುರೆಡ್ಡಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಯಡ್ರಾಮಿ ಜನ ಶಾಂತಿ, ಸೌಹಾರ್ದಕ್ಕೆ ಹೆಸರಾದವರು. ಪಟ್ಟಣದಲ್ಲಿ ಈವರೆಗೆ ಯಾವುದೇ ಗಲಾಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹಬ್ಬದ ದಿನ ಯುವಕರಿಗೆ, ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಎಸ್.ಹಲಕರ್ಟಿ, ಕಾಂಗ್ರೆಸ್ ಮುಖಂಡ ಹಯ್ಯಾಳಪ್ಪ ಗಂಗಾಕರ, ಅಫ್ರೋಜ್ ಅತ್ನೂರ ಮಾತನಾಡಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ಪಟ್ಟಣದ ಮುಸ್ಲಿಂ ಸೇರಿ ಎಲ್ಲಾ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-31-856068975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಡ್ರಾಮಿ: ‘ಎಲ್ಲಾ ಧರ್ಮದ ಮುಖಂಡರು ಮತ್ತು ಸಾರ್ವಜನಿಕರು ಒಟ್ಟಾಗಿ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡಬಾರದು’ ಎಂದು ಇನ್ಸ್ಪೆಕ್ಟರ್ ವಿಶ್ವನಾಥ್ ಎಂ.ಮುದುರೆಡ್ಡಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಯಡ್ರಾಮಿ ಜನ ಶಾಂತಿ, ಸೌಹಾರ್ದಕ್ಕೆ ಹೆಸರಾದವರು. ಪಟ್ಟಣದಲ್ಲಿ ಈವರೆಗೆ ಯಾವುದೇ ಗಲಾಟೆ ನಡೆದಿಲ್ಲ. ಎಲ್ಲ ಹಬ್ಬಗಳಲ್ಲಿ ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ್ದಾರೆ. ಇದೇ ಸಹಕಾರ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹಬ್ಬದ ದಿನ ಯುವಕರಿಗೆ, ಹಿರಿಯರು ಬುದ್ಧಿ ಹೇಳಬೇಕು. ಮೆರವಣಿಗೆ ದಿನ ಯಾವುದೇ ಗೊಂದಲ ಉಂಟಾಗಬಾರದು. ಅಹಿತಕರ ಘಟನೆ ಕಂಡುಬಂದರೆ ಕಾನೂನು ಕೈಗೆ ತೆಗೆದುಕೊಳ್ಳದೆ ಪೊಲೀಸರ ಗಮನಕ್ಕೆ ತರಬೇಕು’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಎಸ್.ಹಲಕರ್ಟಿ, ಕಾಂಗ್ರೆಸ್ ಮುಖಂಡ ಹಯ್ಯಾಳಪ್ಪ ಗಂಗಾಕರ, ಅಫ್ರೋಜ್ ಅತ್ನೂರ ಮಾತನಾಡಿದರು.</p>.<p>ಪೊಲೀಸ್ ಅಧಿಕಾರಿಗಳು ಹಾಗೂ ಪಟ್ಟಣದ ಮುಸ್ಲಿಂ ಸೇರಿ ಎಲ್ಲಾ ಧರ್ಮದ ಮುಖಂಡರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-31-856068975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>