<p><strong>ಯಡ್ರಾಮಿ:</strong> ಪಟ್ಟಣಕ್ಕೆ ಜ.12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ನೇತೃತ್ವದಲ್ಲಿ ಬುಧವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.</p>.<p>ಅಂದು ನೂತನ ತಾಲ್ಲೂಕುಗಳ ವಿಧಾನಸೌಧ ಕಟ್ಟಡಗಳ ಅಡಿಗಲ್ಲು ಸಮಾರಂಭ ಹಾಗೂ 300 ಕೆಪಿಎಸ್ ಶಾಲೆಗಳ ಘೋಷಣೆ ಹಾಗೂ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.</p>.<p>ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಸ್ಥಳ ಹಾಗೂ ಸಾರ್ವಜನಿಕರ ಊಟದ ಸ್ಥಳ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಕಾರ್ಯಕ್ರಮ ನಡೆಯಲಿರುವ ಪಬ್ಲಿಕ್ ಶಾಲೆ ಆವರಣವನ್ನು ಪರಿಶೀಲಿಸಿದರು. ಸಮಾರಂಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.</p>.<p>ಈ ವೇಳೆ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ಯಾಮ ಭಜಂತ್ರಿ, ಪಿಎಸ್ಐ ವಿಶ್ವನಾಥ್ ಮುದರಡ್ಡಿ, ಚಂದ್ರಶೇಖರ ಪುರಾಣಿಕ, ಚಿದಾನಂದ ಸೌದಿ, ಬಸವರಾಜ ಪವಾರ್, ಚಿದಾನಂದ ಮಳೊಳ್ಳಿ, ಮಲ್ಲಿಕಾರ್ಜುನ್ ಹಲಕಟ್ಟಿ, ಸೀತಾರಾಮ್ ಪವಾರ ಅನೇಕರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ:</strong> ಪಟ್ಟಣಕ್ಕೆ ಜ.12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ನೇತೃತ್ವದಲ್ಲಿ ಬುಧವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.</p>.<p>ಅಂದು ನೂತನ ತಾಲ್ಲೂಕುಗಳ ವಿಧಾನಸೌಧ ಕಟ್ಟಡಗಳ ಅಡಿಗಲ್ಲು ಸಮಾರಂಭ ಹಾಗೂ 300 ಕೆಪಿಎಸ್ ಶಾಲೆಗಳ ಘೋಷಣೆ ಹಾಗೂ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.</p>.<p>ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಸ್ಥಳ ಹಾಗೂ ಸಾರ್ವಜನಿಕರ ಊಟದ ಸ್ಥಳ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಕಾರ್ಯಕ್ರಮ ನಡೆಯಲಿರುವ ಪಬ್ಲಿಕ್ ಶಾಲೆ ಆವರಣವನ್ನು ಪರಿಶೀಲಿಸಿದರು. ಸಮಾರಂಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.</p>.<p>ಈ ವೇಳೆ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ಯಾಮ ಭಜಂತ್ರಿ, ಪಿಎಸ್ಐ ವಿಶ್ವನಾಥ್ ಮುದರಡ್ಡಿ, ಚಂದ್ರಶೇಖರ ಪುರಾಣಿಕ, ಚಿದಾನಂದ ಸೌದಿ, ಬಸವರಾಜ ಪವಾರ್, ಚಿದಾನಂದ ಮಳೊಳ್ಳಿ, ಮಲ್ಲಿಕಾರ್ಜುನ್ ಹಲಕಟ್ಟಿ, ಸೀತಾರಾಮ್ ಪವಾರ ಅನೇಕರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>