<p><strong>ಚಿತ್ತಾಪುರ</strong>: ಅಕ್ಟೋಬರ್ 20ರಂದು ಸೀಗಿ ಹುಣ್ಣಿಮೆ ದಿನ ಕೋವಿಡ್ ನಿಯಮಗಳ ಪ್ರಕಾರ ನಾಗಾವಿ ಯಲ್ಲಮ್ಮ ದೇವಿಯ ಜಾತ್ರೆ ಮತ್ತು ಪಲ್ಲಕ್ಕಿ ಉತ್ಸವವು ಪೂಜೆ ಮತ್ತು ಸಂಪ್ರದಾಯಕ್ಕೆ ಸೀಮಿತಗೊಳಿಸಿ ಆಡಳಿತದಿಂದ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ತಿಳಿಸಿದರು.</p>.<p>ಸ್ಥಳೀಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಾಗಾವಿ ಯಲ್ಲಮ್ಮ ದೇವಿ ಜಾತ್ರೆ ಮತ್ತು ಪಲ್ಲಕ್ಕಿ ಉತ್ಸವದ ನಿಮಿತ್ತ ಜನರಿಗೆ ಮಾಹಿತಿ ನೀಡಲು ಮತ್ತು ಜನರ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಪಟ್ಟಣದ ಮುಖಂಡರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕೋವಿಡ್ ನಿಯಮಗಳು ಇನ್ನೂ ಜಾರಿಯಲ್ಲಿದೆ. ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟ ಆದೇಶ ಬಂದಿಲ್ಲ. ಈಗಿರುವ ನಿಯಮಗಳ ಪ್ರಕಾರ ಅತ್ಯಂತ ಕಡಿಮೆ ಜನರು ಇರುವಂತೆ ಎಚ್ಚರಿಕೆ ವಹಿಸಿ ಪಲ್ಲಕ್ಕಿ ಉತ್ಸವದ ಸಂಪ್ರದಾಯ ನೆರವೇರಿಸಲಾಗುವುದು. ಜನರು ಆಡಳಿತಕ್ಕೆ ಸಹಕಾರ ನೀಡಬೇಕು. ಅಂದು ದೇವಸ್ಥಾನದಲ್ಲಿ ದೇವಿಯ ದಶರ್ನಕ್ಕೆ ಅವಕಾಶ ನೀಡಲಾಗುತ್ತದೆ. ಗರ್ಭಗೃಹದಲ್ಲಿ ನೈವೇದ್ಯ, ಕಾಯಿಕರ್ಪೂರ ಅರ್ಪಣೆಗೆ ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದರು.</p>.<p>ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗೆ ಅವಕಾಶ ಇರುವುದಿಲ್ಲ. ದೇವಿಯ ದರ್ಶನಕ್ಕೆ ಬರುವವರು ಕೋವಿಡ್ ಲಸಿಕೆ ಪಡೆದಿರಬೇಕು ಅಥವಾ ಲಸಿಕೆ ಪಡೆದು ದರ್ಶನಕ್ಕೆ ತೆರಳಬೇಕು. ಸರಾಫ್ ಲಚ್ಚಪ್ಪ ನಾಯಕ ಅವರ ಮನೆಯಲ್ಲಿ ಮಧ್ಯಾಹ್ನ 2.30ಕ್ಕೆ ಪಲ್ಲಕ್ಕಿ ಪೂಜೆ ನರವೇರಿಸಿ ತೆರೆದ ವಾಹನದ ಮೂಲಕ ಪಲ್ಲಕ್ಕಿ ದೇವಸ್ಥಾನಕ್ಕೆ ತರಲಾಗುವುದು. ಪಲ್ಲಕ್ಕಿ ಸಂಪ್ರದಾಯ ನೆರವೇರಿಸುವ ಜನರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದರು.</p>.<p>ಮುಖಂಡ ರತ್ನಾಕರ ನಾಯಕ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಪಿಎಸ್ಐ ಮಂಜುನಾಥರೆಡ್ಡಿ, ಹಿರಿಯ ಮುಖಂಡ ಭೀಮಣ್ಣ ಸಾಲಿ, ಈರಪ್ಪ ಭೋವಿ, ಭೀಮು ಕರದಾಳ, ನರಹರಿ ಕುಲಕರ್ಣಿ, ಸಾಬಣ್ಣ ದೊಡ್ಡಮನಿ, ಗೋವಿಂದ ನಾಯಕ, ವಿಷ್ಣು ಜಿತುರೆ ಅವರು ಮಾತನಾಡಿದರು.</p>.<p>ಶಿರಸ್ತೆದಾರ್ ಅಶ್ವಥನಾರಾಯಣ ಅವರು ಕೋವಿಡ್ ನಿಯಮಗಳ ಕುರಿತು ಮಾಹಿತಿ ನೀಡಿದರು. ಮುಖಂಡರಾದ ಮಹ್ಮದ್ ರಸೂಲ್ ಮುಸ್ತಫಾ, ನಾಗರಾಜ ರೇಷ್ಮಿ, ಕಣ್ವ ನಾಯಕ, ವಿನೋಧ ಗುತ್ತೆದಾರ್, ನಾಗರಾಜ ಭಂಕಲಗಾ, ಭೀಮಣ್ಣ ಹೋತಿನಮಡಿ, ಸುರೇಶ ಅಳ್ಳೊಳ್ಳಿ, ಮಲ್ಲಿಕಾರ್ಜುನ ಕಾಳಗಿ, ಅಶ್ವಥ ರಾಠೋಡ್, ಜಗದೀಶ ಸಾಗರ, ಸಿದ್ರಾಮಯ್ಯ ಗೊಂಬಿಮಠ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ</strong>: ಅಕ್ಟೋಬರ್ 20ರಂದು ಸೀಗಿ ಹುಣ್ಣಿಮೆ ದಿನ ಕೋವಿಡ್ ನಿಯಮಗಳ ಪ್ರಕಾರ ನಾಗಾವಿ ಯಲ್ಲಮ್ಮ ದೇವಿಯ ಜಾತ್ರೆ ಮತ್ತು ಪಲ್ಲಕ್ಕಿ ಉತ್ಸವವು ಪೂಜೆ ಮತ್ತು ಸಂಪ್ರದಾಯಕ್ಕೆ ಸೀಮಿತಗೊಳಿಸಿ ಆಡಳಿತದಿಂದ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ತಿಳಿಸಿದರು.</p>.<p>ಸ್ಥಳೀಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಾಗಾವಿ ಯಲ್ಲಮ್ಮ ದೇವಿ ಜಾತ್ರೆ ಮತ್ತು ಪಲ್ಲಕ್ಕಿ ಉತ್ಸವದ ನಿಮಿತ್ತ ಜನರಿಗೆ ಮಾಹಿತಿ ನೀಡಲು ಮತ್ತು ಜನರ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಪಟ್ಟಣದ ಮುಖಂಡರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕೋವಿಡ್ ನಿಯಮಗಳು ಇನ್ನೂ ಜಾರಿಯಲ್ಲಿದೆ. ಜಾತ್ರೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟ ಆದೇಶ ಬಂದಿಲ್ಲ. ಈಗಿರುವ ನಿಯಮಗಳ ಪ್ರಕಾರ ಅತ್ಯಂತ ಕಡಿಮೆ ಜನರು ಇರುವಂತೆ ಎಚ್ಚರಿಕೆ ವಹಿಸಿ ಪಲ್ಲಕ್ಕಿ ಉತ್ಸವದ ಸಂಪ್ರದಾಯ ನೆರವೇರಿಸಲಾಗುವುದು. ಜನರು ಆಡಳಿತಕ್ಕೆ ಸಹಕಾರ ನೀಡಬೇಕು. ಅಂದು ದೇವಸ್ಥಾನದಲ್ಲಿ ದೇವಿಯ ದಶರ್ನಕ್ಕೆ ಅವಕಾಶ ನೀಡಲಾಗುತ್ತದೆ. ಗರ್ಭಗೃಹದಲ್ಲಿ ನೈವೇದ್ಯ, ಕಾಯಿಕರ್ಪೂರ ಅರ್ಪಣೆಗೆ ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದರು.</p>.<p>ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗೆ ಅವಕಾಶ ಇರುವುದಿಲ್ಲ. ದೇವಿಯ ದರ್ಶನಕ್ಕೆ ಬರುವವರು ಕೋವಿಡ್ ಲಸಿಕೆ ಪಡೆದಿರಬೇಕು ಅಥವಾ ಲಸಿಕೆ ಪಡೆದು ದರ್ಶನಕ್ಕೆ ತೆರಳಬೇಕು. ಸರಾಫ್ ಲಚ್ಚಪ್ಪ ನಾಯಕ ಅವರ ಮನೆಯಲ್ಲಿ ಮಧ್ಯಾಹ್ನ 2.30ಕ್ಕೆ ಪಲ್ಲಕ್ಕಿ ಪೂಜೆ ನರವೇರಿಸಿ ತೆರೆದ ವಾಹನದ ಮೂಲಕ ಪಲ್ಲಕ್ಕಿ ದೇವಸ್ಥಾನಕ್ಕೆ ತರಲಾಗುವುದು. ಪಲ್ಲಕ್ಕಿ ಸಂಪ್ರದಾಯ ನೆರವೇರಿಸುವ ಜನರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದರು.</p>.<p>ಮುಖಂಡ ರತ್ನಾಕರ ನಾಯಕ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಪಿಎಸ್ಐ ಮಂಜುನಾಥರೆಡ್ಡಿ, ಹಿರಿಯ ಮುಖಂಡ ಭೀಮಣ್ಣ ಸಾಲಿ, ಈರಪ್ಪ ಭೋವಿ, ಭೀಮು ಕರದಾಳ, ನರಹರಿ ಕುಲಕರ್ಣಿ, ಸಾಬಣ್ಣ ದೊಡ್ಡಮನಿ, ಗೋವಿಂದ ನಾಯಕ, ವಿಷ್ಣು ಜಿತುರೆ ಅವರು ಮಾತನಾಡಿದರು.</p>.<p>ಶಿರಸ್ತೆದಾರ್ ಅಶ್ವಥನಾರಾಯಣ ಅವರು ಕೋವಿಡ್ ನಿಯಮಗಳ ಕುರಿತು ಮಾಹಿತಿ ನೀಡಿದರು. ಮುಖಂಡರಾದ ಮಹ್ಮದ್ ರಸೂಲ್ ಮುಸ್ತಫಾ, ನಾಗರಾಜ ರೇಷ್ಮಿ, ಕಣ್ವ ನಾಯಕ, ವಿನೋಧ ಗುತ್ತೆದಾರ್, ನಾಗರಾಜ ಭಂಕಲಗಾ, ಭೀಮಣ್ಣ ಹೋತಿನಮಡಿ, ಸುರೇಶ ಅಳ್ಳೊಳ್ಳಿ, ಮಲ್ಲಿಕಾರ್ಜುನ ಕಾಳಗಿ, ಅಶ್ವಥ ರಾಠೋಡ್, ಜಗದೀಶ ಸಾಗರ, ಸಿದ್ರಾಮಯ್ಯ ಗೊಂಬಿಮಠ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>