ಚಿತ್ತಾಪುರ: ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ದೇವಸ್ಥಾನದ ಹುಂಡಿಯ ಹಣವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿ ಶನಿವಾರ ಎಣಿಕೆ ಮಾಡಿದರು. ಒಟ್ಟು ₹9.65 ಲಕ್ಷ ಹಣ ಹುಂಡಿಯಲ್ಲಿತ್ತು. ಕಂದಾಯ ಸಿಬ್ಬಂದಿ ಎಣಿಕೆ ಮಾಡಿದರು. ಬ್ಯಾಂಕ್ ಸಿಬ್ಬಂದಿ ಹಣ ಎಣಿಸಿಕೊಂಡು ದೇವಸ್ಥಾನದ ಹೆಸರಲ್ಲಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿಕೊಂಡರು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ತಿಳಿಸಿದರು.