ಕಲಬುರ್ಗಿ: ಯಾನಾಗುಂದಿಯ ಮಾತೆ ಮಾಣಿಕೇಶ್ವರಿ ಅಮ್ಮನವರ ಅಂತಿಮ ದರ್ಶನದ ಅವಧಿಯನ್ನು ಭಕ್ತರ ಸಂಖ್ಯೆ ಅಧಿಕಗೊಂಡ ಪ್ರಯುಕ್ತ ಒಂದು ಗಂಟೆ ಹೆಚ್ಚಿಸಲಾಗಿದೆ ಎಂದು ಅಶ್ರಮದ ಆಡಳಿತ ಮಂಡಳಿಯವರು ಘೋಷಿಸಿದರು.
ಮೊದಲು ಮಧ್ಯಾಹ್ನ 1ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಇದೀಗ 2 ಗಂಟೆಯವರೆಗೆ ಭಕ್ತರು ದರ್ಶನ ಪಡೆಯಬಹುದು. ನಂತರ ಅಂತ್ಯಸಂಸ್ಕಾರದ ವಿಧಿವಿಧಾನಗಳು ಆರಂಭವಾಗಲಿವೆ.
ಕಲ್ಯಾಣ ಕರ್ನಾಟಕ ಕೃಷಿ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಯಾದಗಿರಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ ದರ್ಶನ ಪಡೆದರು.