ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಿ ಗೆದ್ದ ಗುರುರಾಜ್‌ಗೆ ಸರ್ಕಾರಿ ಕೆಲಸ, ₹15 ಲಕ್ಷ ನಗದು ಬಹುಮಾನ: ಪ್ರಮೋದ್‌ ಮಧ್ವರಾಜ್‌

Last Updated 6 ಏಪ್ರಿಲ್ 2018, 11:43 IST
ಅಕ್ಷರ ಗಾತ್ರ

ಉಡುಪಿ: ‘ಕ್ರೀಡಾನೀತಿಯ ಅನ್ವಯ ವೇಟ್‌ಲಿಫ್ಟರ್‌ ಗುರುರಾಜ್‌ ಅವರಿಗೆ ₹ 15 ಲಕ್ಷ ನಗದು ಹಾಗೂ ಸರ್ಕಾರಿ ಬಿ ಗ್ರೂಪ್‌ ಹುದ್ದೆ ಸಿಗಲಿದೆ. ತಿಂಗಳ ಹಿಂದೆಯಷ್ಟೇ ಅವರು ಏಕಲವ್ಯ ಪ್ರಶಸ್ತಿ ಗಳಿಸಿದ್ದರು. ಈಗ ಪದಕ ಗೆದ್ದಿರುವುದು ಸಂತಸ ತಂದಿದೆ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್‌ ಮಧ್ವರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಗುರುವಾರ ನಡೆದ ಪುರುಷರ ವೇಟ್‌ಲಿಫ್ಟಿಂಗ್‌ನ 56 ಕೆ.ಜಿ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಕುಂದಾಪುರ ಸಮೀಪದ ಜೆಡ್ಡು ಚಿತ್ತೂರಿನ ಗುರುರಾಜ್‌ ಪೂಜಾರಿ ಬೆಳ್ಳಿ ಪದಕ ಜಯಿಸಿದರು. ಜತೆಗೆ ಮಹಿಳೆಯರ ವೇಟ್‌ಲಿಫ್ಟಿಂಗ್‌ನ 48 ಕೆ.ಜಿ ವಿಭಾಗದಲ್ಲಿ ಭಾರತದ ಸಾಯಿಕೋಮ್‌ ಮೀರಾಬಾಯಿ ಚಾನು ಚಿನ್ನ ಪದಕ ಗೆದ್ದಿದ್ದರು.

ಭಾರತ ಕ್ರೀಡಾಪಟುಗಳು ಇವರೆಗೆ 2 ಚಿನ್ನ, 1 ಬೆಳ್ಳಿ, 1 ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT