<p><strong>ಕಲಬುರ್ಗಿ:</strong> ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲು ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಚುಟುಕಾದ ಭಾಷಣ ಮಾಡಿ ನಿರ್ಗಮಿಸಿದರು.</p>.<p>ಬೆಳಿಗ್ಗೆ 8.15ಕ್ಕೆ ಅವರು ವಿಶೇಷ ವಿಮಾನದ ಮೂಲಕ ಇಲ್ಲಿಗೆ ಬರಬೇಕಿತ್ತು. 45 ನಿಮಿಷ ತಡವಾಗಿ ಬಂದರು. ವಿಮಾನ ನಿಲ್ದಾಣದಿಂದ ನೇರವಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಕ್ಕೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು, ಡಿಎಆರ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅವರಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಯಿತು. ಅವರ ನಂತರ ಭಾಷಣ ಆರಂಭಿಸಿದ ಯಡಿಯೂರಪ್ಪ ಎರಡೂವರೆ ಪುಟ ಇದ್ದ ಲಿಖಿತ ಭಾಷಣ ಬದಿಗಿಟ್ಟು ಕೆಲವೇ ನಿಮಿಷ ಮಾತನಾಡಿ ಹೊರಟು ನಿಂತರು.</p>.<p>ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಜಿಲ್ಲಾ ಆಡಳಿತ ಕೊನೆಯಲ್ಲಿ ಇಟ್ಟುಕೊಂಡಿತ್ತು. ಲಗುಬಗೆಯಿಂದ ಸನ್ಮಾನ ನೆರವೇರಿಸಿದ ಮುಖ್ಯಮಂತ್ರಿ ವಿಮಾನ ನಿಲ್ದಾಣದತ್ತ ತೆರಳಿದರು.</p>.<p>ಮುಖ್ಯಮಂತ್ರಿಯ ದೆಹಲಿ ಯಾತ್ರೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾಥ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲು ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಚುಟುಕಾದ ಭಾಷಣ ಮಾಡಿ ನಿರ್ಗಮಿಸಿದರು.</p>.<p>ಬೆಳಿಗ್ಗೆ 8.15ಕ್ಕೆ ಅವರು ವಿಶೇಷ ವಿಮಾನದ ಮೂಲಕ ಇಲ್ಲಿಗೆ ಬರಬೇಕಿತ್ತು. 45 ನಿಮಿಷ ತಡವಾಗಿ ಬಂದರು. ವಿಮಾನ ನಿಲ್ದಾಣದಿಂದ ನೇರವಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಕ್ಕೆ ತೆರಳಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು, ಡಿಎಆರ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅವರಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಯಿತು. ಅವರ ನಂತರ ಭಾಷಣ ಆರಂಭಿಸಿದ ಯಡಿಯೂರಪ್ಪ ಎರಡೂವರೆ ಪುಟ ಇದ್ದ ಲಿಖಿತ ಭಾಷಣ ಬದಿಗಿಟ್ಟು ಕೆಲವೇ ನಿಮಿಷ ಮಾತನಾಡಿ ಹೊರಟು ನಿಂತರು.</p>.<p>ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಜಿಲ್ಲಾ ಆಡಳಿತ ಕೊನೆಯಲ್ಲಿ ಇಟ್ಟುಕೊಂಡಿತ್ತು. ಲಗುಬಗೆಯಿಂದ ಸನ್ಮಾನ ನೆರವೇರಿಸಿದ ಮುಖ್ಯಮಂತ್ರಿ ವಿಮಾನ ನಿಲ್ದಾಣದತ್ತ ತೆರಳಿದರು.</p>.<p>ಮುಖ್ಯಮಂತ್ರಿಯ ದೆಹಲಿ ಯಾತ್ರೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾಥ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>