ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡ್ರಾಮಿ: ವೈದ್ಯರಿಲ್ಲದೆ ಆಸ್ಪತ್ರೆ ಮುಂದೆ ನರಳಿದ ಯುವಕ

Last Updated 29 ಜನವರಿ 2020, 8:59 IST
ಅಕ್ಷರ ಗಾತ್ರ

ಯಡ್ರಾಮಿ: ತಾಲ್ಲೂಕಿನ ಇಜೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಅಪಘಾತದಲ್ಲಿ ಗಾಯಗೊಂಡ ಯುವಕ ಆಸ್ಪತ್ರೆ ಮುಂದೆ ನರಳಿದ ಅಮಾನವೀಯ ಘಟನೆನಡೆದಿದೆ.

ಸಾಥಖೇಡ ಗ್ರಾಮದ ಈರಣ್ಣ ಮುತ್ಯ ದೇವರ ದರ್ಶನಕ್ಕೆ ಹೋಗಿ ಹಿಂದಿರುಗುವಾಗ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಗಾಯಾಳು ಯುವಕ ಸಿಂದಗಿ ತಾಲ್ಲೂಕಿನ ತಿಳಗೂಳ ಗ್ರಾಮದವರು. ಅವರನ್ನು ದಾಖಲು ಮಾಡಿಕೊಳ್ಳಲು ಇಜೇರಿಯಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಅವರನ್ನು ಆಂಬುಲೆನ್ಸ್‌ನಲ್ಲಿ ಸಿಂದಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರ ಇನ್ನು ಮುಂದೆಯಾದರೂ ಆಸ್ಪತ್ರೆಗಳಲ್ಲಿ ವೈದ್ಯರು ಇರುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT