ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ವಿಷಯದ ತಿಳಿದು ಹಾಸ್ಟೆಲ್ಗೆ ಧಾವಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಹಾಗೂ ಯುವತಿಯರು ಕೂಡಿಕೊಂಡು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಹಿಡಿದು ಥಳಿಸಿದ ಗಟ್ಟಿಗಿತ್ತಿ ವಿದ್ಯಾರ್ಥಿನಿಯರ ಸಾಹಸ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಅವರ ಧೈರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಂಟಿ ಸತೀಶ್ ಕೆ.ಎಚ್. ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.