<p><strong>ಕಮಲಾಪುರ</strong> (<strong>ಕಲಬುರಗಿ</strong> ಜಿಲ್ಲೆ): ಕಮಲಾಪುರ ತಾಲ್ಲೂಕಿನ ಪಟವಾದ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ನಲ್ಲಿ ಕುಡಿದ ಮತ್ತಿನಲ್ಲಿ ಈಜಲು ಹೋಗಿ ತೆಲಂಗಾಣ ಮೂಲದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ಹೈದರಾಬಾದ್ನ ಜಹಂಗೀರಾಬಾದ್ ಸಮೀಪದ ಬಂದಲಗೂಡಾ ನಿವಾಸಿ ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕ.</p><p>ಮೇ 19ರಂದು ಮೃತ ಸಾಜೀದ್ ತನ್ನ ಸ್ನೇಹಿತರಾದ ಸೈಯದ್ ವಾಜೀದ್, ಮೊಹಮ್ಮದ್ ಅಫ್ರೋಜ್, ತಾಜ್ಜುದೀನ್ ಹಾಗೂ ಸೈಯದ್ ಸಮೀರ್ ಜೊತೆ ಸೇರಿ ಆಟೊದಲ್ಲಿ ಚಿಟಗುಪ್ಪ-ಸೊಂತ ಮಾರ್ಗವಾಗಿ ಕಮಲಾಪುರ ತಾಲ್ಲೂಕಿನ ಚೇಂಗಟಾ ಮಸ್ತಾನ ಖಾದ್ರಿ ದರ್ಗಾಕ್ಕೆ ಬಂದಿದ್ದರು. ಮಾರ್ಗಮಧ್ಯದ ಪಟವಾದ ಬ್ರಿಜ್ ಕಂ ಬ್ಯಾರೇಜ್ನಲ್ಲಿ ಸ್ನಾನ ಮಾಡಲು ಅಫ್ರೋಜ್ ಹಾಗೂ ತಾಜ್ಜುದೀನ್ ನೀರಲ್ಲಿ ಇಳಿದರು. ಆ ಬಳಿಕ ಸಾಜೀದ್ ಸಹ ನೀರಿಗೆ ಹಾರಿದ್ದು, ಕುಡಿದ ಮತ್ತಿನಲ್ಲಿ ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟರು. ಕಮಲಾಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಾಜೀದ್ ಅವರು ನೀರಿಗೆ ಹಾರಿದ್ದ ದೃಶ್ಯಗಳನ್ನು ಮತ್ತೊಬ್ಬ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ನೀರಿನಲ್ಲಿ ಮುಳುಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಮೃತ ಸಾಜೀದ್ ಸಹೋದರ ಮೊಹಮ್ಮದ ರಶೀದ್, 'ನನ್ನ ತಮ್ಮನಿಗೆ ಈಜು ಬರುತ್ತಿದ್ದೆ. ಆದರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಕುರಿತು ನನಗೆ ಬಲವಾದ ಸಂಶಯವಿದೆ. ಈ ಕುರಿತು ತನಿಖೆ ನಡೆಸುವಂತೆ ದೂರು ನೀಡಿದ್ದಾರೆ'. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ</strong> (<strong>ಕಲಬುರಗಿ</strong> ಜಿಲ್ಲೆ): ಕಮಲಾಪುರ ತಾಲ್ಲೂಕಿನ ಪಟವಾದ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ನಲ್ಲಿ ಕುಡಿದ ಮತ್ತಿನಲ್ಲಿ ಈಜಲು ಹೋಗಿ ತೆಲಂಗಾಣ ಮೂಲದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ಹೈದರಾಬಾದ್ನ ಜಹಂಗೀರಾಬಾದ್ ಸಮೀಪದ ಬಂದಲಗೂಡಾ ನಿವಾಸಿ ಮೊಹಮ್ಮದ್ ಸಾಜೀದ್ ದಸ್ತಗೀರ್ (25) ಮೃತ ಯುವಕ.</p><p>ಮೇ 19ರಂದು ಮೃತ ಸಾಜೀದ್ ತನ್ನ ಸ್ನೇಹಿತರಾದ ಸೈಯದ್ ವಾಜೀದ್, ಮೊಹಮ್ಮದ್ ಅಫ್ರೋಜ್, ತಾಜ್ಜುದೀನ್ ಹಾಗೂ ಸೈಯದ್ ಸಮೀರ್ ಜೊತೆ ಸೇರಿ ಆಟೊದಲ್ಲಿ ಚಿಟಗುಪ್ಪ-ಸೊಂತ ಮಾರ್ಗವಾಗಿ ಕಮಲಾಪುರ ತಾಲ್ಲೂಕಿನ ಚೇಂಗಟಾ ಮಸ್ತಾನ ಖಾದ್ರಿ ದರ್ಗಾಕ್ಕೆ ಬಂದಿದ್ದರು. ಮಾರ್ಗಮಧ್ಯದ ಪಟವಾದ ಬ್ರಿಜ್ ಕಂ ಬ್ಯಾರೇಜ್ನಲ್ಲಿ ಸ್ನಾನ ಮಾಡಲು ಅಫ್ರೋಜ್ ಹಾಗೂ ತಾಜ್ಜುದೀನ್ ನೀರಲ್ಲಿ ಇಳಿದರು. ಆ ಬಳಿಕ ಸಾಜೀದ್ ಸಹ ನೀರಿಗೆ ಹಾರಿದ್ದು, ಕುಡಿದ ಮತ್ತಿನಲ್ಲಿ ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟರು. ಕಮಲಾಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸಾಜೀದ್ ಅವರು ನೀರಿಗೆ ಹಾರಿದ್ದ ದೃಶ್ಯಗಳನ್ನು ಮತ್ತೊಬ್ಬ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ನೀರಿನಲ್ಲಿ ಮುಳುಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಮೃತ ಸಾಜೀದ್ ಸಹೋದರ ಮೊಹಮ್ಮದ ರಶೀದ್, 'ನನ್ನ ತಮ್ಮನಿಗೆ ಈಜು ಬರುತ್ತಿದ್ದೆ. ಆದರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಕುರಿತು ನನಗೆ ಬಲವಾದ ಸಂಶಯವಿದೆ. ಈ ಕುರಿತು ತನಿಖೆ ನಡೆಸುವಂತೆ ದೂರು ನೀಡಿದ್ದಾರೆ'. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>