ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವು

Last Updated 18 ಅಕ್ಟೋಬರ್ 2020, 16:57 IST
ಅಕ್ಷರ ಗಾತ್ರ

ಶಹಾಬಾದ್:ತಾಲ್ಲೂಕಿನ ತೊನಸನಳ್ಳಿ (ಎಸ್) ಗ್ರಾಮದ ಹೊಲದಲ್ಲಿ ಯುವಕನೊಬ್ಬ ಅಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನವೀನ ಅಮೃತ ಕಪನೂರ (18) ಮೃತರು. ಜೇವರ್ಗಿ ರಸ್ತೆಯಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅವಘಡ ನಡೆದಿದೆ.

ಶಹಾಬಾದ್ ಠಾಣೆಯ ಪಿಐ ಬಿ.ಅಮರೇಶ, ಪಿಎಸ್‍ಐ ತಿರುಮಲೇಶ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಶಾಸಕ ಬಸವರಾಜ ಮತ್ತಿಮೂಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಯುವಕನ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸುವಂತೆಸ್ಥಳದಲ್ಲಿದ್ದ ತಹಶೀಲ್ದಾರ್ ಸುರೇಶ ವರ್ಮಾ ಅವರಿಗೆ ತಿಳಿಸಿದರು.

ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT