ಎಲ್ ಅಂಡ್ ಟಿ ಕಂಪನಿಯ ಕ್ಷೇತ್ರ ಅಧಿಕಾರಿಯಾಗಿದ್ದ ಪ್ರಭಾಕರ ಬೆಳಕೋಟಾ ಪುನರ್ವಸತಿ ಕೇಂದ್ರದಲ್ಲಿ ವಾಸವಾಗಿದ್ದರು. ಕಮಲಾಪುರ ಪಟ್ಟಣದಲ್ಲಿನ ಖಾನಾವಳಿಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಬೆಳಕೋಟಾ ಕ್ರಾಸ್ ಬಳಿ ಬೈಕ್ ತಿರುಗಿಸಿದ್ದಾರೆ. ಈ ಸಂದರ್ಭ ಹಿಂದಿನಿಂದ ಬೈಕಿನಲ್ಲಿ ಬಂದ ಆಸೀಫ್ ಡಿಕ್ಕಿ ಹೊಡೆದಿದ್ದಾರೆ. ತೀವ್ರ ಗಾಯಗೊಂಡ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಭಾಕರ ಅಸುನೀಗಿದರು.