<p><strong>ಕಮಲಾಪುರ (ಕಲಬುರ್ಗಿ ಜಿಲ್ಲೆ):</strong> ಪಟ್ಟಣದ ಬೆಳಕೋಟಾ ಕ್ರಾಸ್ ಬಳಿ ಸೋಮವಾರ ರಾತ್ರಿ ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಮಂಗಳವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಹುಮನಾಬಾದ್ ತಾಲ್ಲೂಕಿನ ಜಲಸಂಗಿ ಗ್ರಾಮದ ಪ್ರಭಾಕರ ತಿಪ್ಪಣ್ಣ (28) ಮೃತ ವ್ಯಕ್ತಿ. ಇವರಿಗೆ ಬೈಕಿನಲ್ಲಿ ಡಿಕ್ಕಿ ಹೊಡೆದ ಮಾಲಗತ್ತಿ ಗ್ರಾಮದ ಆಸೀಫ್ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಎಲ್ ಅಂಡ್ ಟಿ ಕಂಪನಿಯ ಕ್ಷೇತ್ರ ಅಧಿಕಾರಿಯಾಗಿದ್ದ ಪ್ರಭಾಕರ ಬೆಳಕೋಟಾ ಪುನರ್ವಸತಿ ಕೇಂದ್ರದಲ್ಲಿ ವಾಸವಾಗಿದ್ದರು. ಕಮಲಾಪುರ ಪಟ್ಟಣದಲ್ಲಿನ ಖಾನಾವಳಿಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಬೆಳಕೋಟಾ ಕ್ರಾಸ್ ಬಳಿ ಬೈಕ್ ತಿರುಗಿಸಿದ್ದಾರೆ. ಈ ಸಂದರ್ಭ ಹಿಂದಿನಿಂದ ಬೈಕಿನಲ್ಲಿ ಬಂದ ಆಸೀಫ್ ಡಿಕ್ಕಿ ಹೊಡೆದಿದ್ದಾರೆ. ತೀವ್ರ ಗಾಯಗೊಂಡ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಭಾಕರ ಅಸುನೀಗಿದರು.</p>.<p>ಪಿಎಸ್ಐ ಭೀಮರಾಯ ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರ್ಗಿ ಜಿಲ್ಲೆ):</strong> ಪಟ್ಟಣದ ಬೆಳಕೋಟಾ ಕ್ರಾಸ್ ಬಳಿ ಸೋಮವಾರ ರಾತ್ರಿ ಎರಡು ಬೈಕ್ಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಮಂಗಳವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಹುಮನಾಬಾದ್ ತಾಲ್ಲೂಕಿನ ಜಲಸಂಗಿ ಗ್ರಾಮದ ಪ್ರಭಾಕರ ತಿಪ್ಪಣ್ಣ (28) ಮೃತ ವ್ಯಕ್ತಿ. ಇವರಿಗೆ ಬೈಕಿನಲ್ಲಿ ಡಿಕ್ಕಿ ಹೊಡೆದ ಮಾಲಗತ್ತಿ ಗ್ರಾಮದ ಆಸೀಫ್ ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಎಲ್ ಅಂಡ್ ಟಿ ಕಂಪನಿಯ ಕ್ಷೇತ್ರ ಅಧಿಕಾರಿಯಾಗಿದ್ದ ಪ್ರಭಾಕರ ಬೆಳಕೋಟಾ ಪುನರ್ವಸತಿ ಕೇಂದ್ರದಲ್ಲಿ ವಾಸವಾಗಿದ್ದರು. ಕಮಲಾಪುರ ಪಟ್ಟಣದಲ್ಲಿನ ಖಾನಾವಳಿಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಮರಳುತ್ತಿದ್ದರು. ಬೆಳಕೋಟಾ ಕ್ರಾಸ್ ಬಳಿ ಬೈಕ್ ತಿರುಗಿಸಿದ್ದಾರೆ. ಈ ಸಂದರ್ಭ ಹಿಂದಿನಿಂದ ಬೈಕಿನಲ್ಲಿ ಬಂದ ಆಸೀಫ್ ಡಿಕ್ಕಿ ಹೊಡೆದಿದ್ದಾರೆ. ತೀವ್ರ ಗಾಯಗೊಂಡ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಭಾಕರ ಅಸುನೀಗಿದರು.</p>.<p>ಪಿಎಸ್ಐ ಭೀಮರಾಯ ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>