ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

Last Updated 28 ಜೂನ್ 2021, 11:09 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಆಲಗೂಡ ಗ್ರಾಮದಲ್ಲಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಸಂತೋಷ ಹೂಗಾರ (30) ಕೊಲೆಯಾದ ಯುವಕ. ಕಲಬುರ್ಗಿ ರಾಮ ನಗರದ ನಿವಾಸಿಯಾಗಿದ್ದ ಸಂತೋಷ ಭಾನುವಾರ ಮುಂಜಾನೆ ಮನೆಯಿಂದ ಹೊರಹೋಗಿದ್ದ.

ಸೋಮವಾರ ಶವವಾಗಿ ಪತ್ತೆಯಾಗಿದ್ದಾನೆ.‌ ಪರಿಚಿತರಿಂದಲೇ ಈತ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ‌ಘಟನಾ ಸ್ಥಳಕ್ಕೆ 'ಸಿ' ಉಪವಿಭಾಗದ ಎಸಿಪಿ ಜೆ.ಎಚ್.ಇನಾಂದಾರ, ಗ್ರಾಮೀಣ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಬಾಸು ಚವ್ಹಾಣ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT