<p><strong>ಕಲಬುರಗಿ:</strong> ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಗಿರೀಶ್ ಡಿ. ಬದೋಲೆ ಶುಕ್ರವಾರ ಅಧಿಕಾರ ಸ್ವೀಕರಿಸಿದರು.</p>.<p>ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು ಅಧಿಕಾರ ಹಸ್ತಾಂತರಿಸಿದರು.</p>.<p>2018ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಡಾ.ಗಿರೀಶ್ ಡಿ. ಬದೋಲೆ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆ ಉಮರ್ಗಾ ತಾಲ್ಲೂಕು ಕಸಗಿ ಗ್ರಾಮದವರು.ಎಂಬಿಬಿಎಸ್ ಪದವೀಧರರಾಗಿರುವ ಅವರು ಒ.ಎನ್.ಜಿ.ಸಿ ಸಂಸ್ಥೆಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ.</p>.<p>ತುಮಕೂರು ಜಿಲ್ಲೆಯಲ್ಲಿ ಐ.ಎ.ಎಸ್. ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿರುವ ಇವರು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು 15 ತಿಂಗಳು ಕಲಬುರಗಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.</p>.<p>ಎಂಬಿಬಿಎಸ್ ಪದವೀಧರರೇ ಸಿಇಒಗಳು; ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ, ಹಿಂದಿನ ಸಿಇಒ ಆಗಿದ್ದ ಡಾ.ಪಿ.ರಾಜಾ ಹಾಗೂ ಈಗ ಅಧಿಕಾರ ಸ್ವೀಕರಿಸಿರುವ ಡಾ. ಗಿರೀಶ್ ಡಿ. ಬದೋಲೆ ಅವರು ಎಂ.ಬಿ.ಬಿ.ಎಸ್ ಪದವೀಧರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಗಿರೀಶ್ ಡಿ. ಬದೋಲೆ ಶುಕ್ರವಾರ ಅಧಿಕಾರ ಸ್ವೀಕರಿಸಿದರು.</p>.<p>ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು ಅಧಿಕಾರ ಹಸ್ತಾಂತರಿಸಿದರು.</p>.<p>2018ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಡಾ.ಗಿರೀಶ್ ಡಿ. ಬದೋಲೆ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆ ಉಮರ್ಗಾ ತಾಲ್ಲೂಕು ಕಸಗಿ ಗ್ರಾಮದವರು.ಎಂಬಿಬಿಎಸ್ ಪದವೀಧರರಾಗಿರುವ ಅವರು ಒ.ಎನ್.ಜಿ.ಸಿ ಸಂಸ್ಥೆಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ.</p>.<p>ತುಮಕೂರು ಜಿಲ್ಲೆಯಲ್ಲಿ ಐ.ಎ.ಎಸ್. ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿರುವ ಇವರು, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ ಅವರು 15 ತಿಂಗಳು ಕಲಬುರಗಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.</p>.<p>ಎಂಬಿಬಿಎಸ್ ಪದವೀಧರರೇ ಸಿಇಒಗಳು; ನಿರ್ಗಮಿತ ಸಿ.ಇ.ಒ ಡಾ.ದಿಲೀಷ್ ಶಶಿ, ಹಿಂದಿನ ಸಿಇಒ ಆಗಿದ್ದ ಡಾ.ಪಿ.ರಾಜಾ ಹಾಗೂ ಈಗ ಅಧಿಕಾರ ಸ್ವೀಕರಿಸಿರುವ ಡಾ. ಗಿರೀಶ್ ಡಿ. ಬದೋಲೆ ಅವರು ಎಂ.ಬಿ.ಬಿ.ಎಸ್ ಪದವೀಧರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>