ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿತ್ತನೆಬೀಜ ದಾಸ್ತಾನು ಪರಿಶೀಲನೆ

Last Updated 2 ಜೂನ್ 2020, 16:00 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಅವರಾದ, ಮಹಾಗಾಂವ ಹಾಗೂ ಕಮಲಾಪೂರ ರೈತ ಸಂಪರ್ಕ ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿದ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಅವರು ಬಿತ್ತನೆ ಬೀಜಗಳ ದಾಸ್ತಾನು ಪರಿಶೀಲಿಸಿದರು.

‘ಮುಂಗಾರು ಆರಂಭವಾದ ಕಾರಣ, ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿನಲ್ಲಿ ಲಭ್ಯವಿದ್ದು, ರೈತರು ಆತಂಕ ಪಡಬೇಕಿಲ್ಲ’ ಎಂದು ಸುವರ್ಣಾ ಹೇಳಿದರು.

‘ರೈತರು ಅಂತರ ಕಾಯ್ದುಕೊಂಡು ಬೀಜಗಳನ್ನು ತೆಗೆದುಕೊಳ್ಳತ್ತಿರುವುದು ಸಮಾಧಾನದ ಸಂಗತಿ. ಕೃಷಿ ಕಾರ್ಯಗಳ ಜತೆಗೇ ನಾವು ಕೊರೊನಾದಿಂದ ಸುರಕ್ಷಿತವಾಗಿ ಇರುವ ಬಗ್ಗೆಯೂ ಕಾಳಜಿ ವಹಿಸಬೇಕಿದೆ’ ಎಂದು ಸಲಹೆ ನೀಡಿದರು.

ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಬೀಜಗಳನ್ನು ವಿತರಿಸಲು ಕೃಷಿ ಅಧಿಕಾರಿಗಳಿಗೆ ಅಧ್ಯಕ್ಷೆ ಸೂಚಿಸಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು, ಮುಖಂಡ ಹಣಮಂತರಾಯ ಮಾಲಾಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT