ಆಳಂದ ತಾಲ್ಲೂಕು ಹೊರತುಪಡೆಸಿ ಮತಕ್ಷೇತ್ರದ ಹೊರೆಗೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಶನಿವಾರ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಮತಗಟ್ಟೆ ಕೇಂದ್ರದ ಸುತ್ತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಪರ ಬೆಂಬಲಿಗರು ಇದ್ದರು. ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಪಾಟೀಲ, ಬಿಜೆಪಿ ಅಭ್ಯರ್ಥಿ ಸುಭಾಷ ಗುತ್ತೇದಾರ ಹಾಗೂ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ ಕೊರಳ್ಳಿ, ಎಂಇಪಿ ಅಭ್ಯರ್ಥಿ ಅಫ್ಜಲ್ ಅನ್ಸಾರಿ ಸಹ ಮತಗಟ್ಟೆಗೆ ಭೇಟಿ ನೀಡಿದರು.