ಕಲಬುರ್ಗಿ: ಮಾಜಿ ಸಚಿವ ರೇವುನಾಯಕ ಬೆಳಮಗಿ ಅವರು ಪ್ರಯಾಣಿಸುತ್ತಿದ್ದ ಕಾರು ಆಳಂದ ತಾಲ್ಲೂಕು ಚಿಂಚನಸೂರ ಬಳಿ ಶನಿವಾರ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬೆಳಮಗಿ ಅವರು ಅಪಾಯದಿಂದ ಪಾರಾಗಿದ್ದಾರೆ.
ಚಿಂಚನಸೂರನಿಂದ ಬೋಧನ ಗ್ರಾಮದತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣದ ತಪ್ಪಿದ ವಾಹನ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗೊಂಡ ಅವರನ್ನು ತಕ್ಷಣ ಕಲಬುರ್ಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತು.
‘ಎಡಗಾಲಿಗೆ ಸ್ವಲ್ಪ ಪೆಟ್ಟಾಗಿದ್ದು, ಸ್ಕ್ಯಾನಿಂಗ್ ಮಾಡಲಾಗಿದೆ. ಬೇರೆ ಯಾವುದೇ ರೀತಿಯ ಅಪಾಯವಿಲ್ಲ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.