ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಅಪಘಾತ: ಮಾಜಿ ಸಚಿವ ಬೆಳಮಗಿಗೆ ಗಾಯ

Last Updated 21 ಮೇ 2017, 5:56 IST
ಅಕ್ಷರ ಗಾತ್ರ

ಕಲಬುರ್ಗಿ: ಮಾಜಿ ಸಚಿವ ರೇವುನಾಯಕ ಬೆಳಮಗಿ ಅವರು ಪ್ರಯಾಣಿಸುತ್ತಿದ್ದ ಕಾರು ಆಳಂದ ತಾಲ್ಲೂಕು ಚಿಂಚನಸೂರ ಬಳಿ ಶನಿವಾರ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಬೆಳಮಗಿ ಅವರು ಅಪಾಯದಿಂದ ಪಾರಾಗಿದ್ದಾರೆ.

ಚಿಂಚನಸೂರನಿಂದ ಬೋಧನ ಗ್ರಾಮದತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣದ ತಪ್ಪಿದ ವಾಹನ ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದಿದೆ. ಸಣ್ಣ ಪುಟ್ಟ ಗಾಯಗೊಂಡ ಅವರನ್ನು ತಕ್ಷಣ ಕಲಬುರ್ಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತು.

‘ಎಡಗಾಲಿಗೆ ಸ್ವಲ್ಪ ಪೆಟ್ಟಾಗಿದ್ದು, ಸ್ಕ್ಯಾನಿಂಗ್ ಮಾಡಲಾಗಿದೆ. ಬೇರೆ ಯಾವುದೇ ರೀತಿಯ ಅಪಾಯವಿಲ್ಲ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT