ಕಾರ್ಮಿಕರು ಮೃತಪಟ್ಟಿರುವ ಸುದ್ದಿ ತಿಳಿದ ಇಟಗಾ ಹಾಗೂ ಅಕ್ಕಪಕ್ಕದ ಗ್ರಾಮಗಳ ಜನರು ಕೆಲಸದಲ್ಲಿ ನಿರತರಾಗಿದ್ದ ಕೆಲವು ಅಧಿಕಾರಿಗಳನ್ನು ಥಳಿಸಿದರು. ಬಳಿಕ ಗ್ರಾಮದ ಹನುಮಾನ ಮಂದಿರದಲ್ಲಿ 15 ಜನರನ್ನು ಕೂಡಿ ಹಾಕಿದರು. ಆಗ ಸ್ಥಳದಲ್ಲಿದ್ದ ಪೊಲೀಸರು ಮತ್ತೆ ಲಾಠಿ ಪ್ರಹಾರ ಮಾಡಿದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಕಂಪೆನಿಯ ರಕ್ಷಣಾ ಗೇಟ್ ಬಳಿಯ ಭದ್ರತಾ ಸಿಬ್ಬಂದಿ ಕೊಠಡಿಗೆ ಬೆಂಕಿ ಹಚ್ಚಿದರು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ವಾಹನಗಳತ್ತ ಮನಬಂದಂತೆ ಕಲ್ಲು ತೂರಾಟ ನಡೆಸಿದರು.