<p><strong>ಚಿತ್ತಾಪುರ: ‘</strong>ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗದಂತೆ ತಡೆಯಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಫಲಿಸುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ₹ 10 ಸಾವಿರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ₹ 1 ಲಕ್ಷ ಸಾಲ ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಅಭ್ಯರ್ಥಿ ವಾಲ್ಮೀಕ ನಾಯಕ, ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ರಘುನಾಥ ಮಲ್ಕಾಪುರೆ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಪಾಟೀಲ್ ಅಲ್ಲೂರ , ಲಿಂಗಾರೆಡ್ಡಿ ಭಾಸರೆಡ್ಡಿ, ಶಿವಲಿಂಗಪ್ಪ ವಾಡೆದ್, ಅರವಿಂದ ಚವಾಣ್, ಬಿಜೆಪಿ ರಾಜ್ಯ ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ರವೀಂದ್ರ ಸಜ್ಜನಶೆಟ್ಟಿ, ತಮ್ಮಣ್ಣ ಡಿಗ್ಗಿ, ನೀಲಕಂಠರಾವ ಪಾಟೀಲ್, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ: ‘</strong>ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗದಂತೆ ತಡೆಯಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಫಲಿಸುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.</p>.<p>ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ₹ 10 ಸಾವಿರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ₹ 1 ಲಕ್ಷ ಸಾಲ ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಅಭ್ಯರ್ಥಿ ವಾಲ್ಮೀಕ ನಾಯಕ, ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ರಘುನಾಥ ಮಲ್ಕಾಪುರೆ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಪಾಟೀಲ್ ಅಲ್ಲೂರ , ಲಿಂಗಾರೆಡ್ಡಿ ಭಾಸರೆಡ್ಡಿ, ಶಿವಲಿಂಗಪ್ಪ ವಾಡೆದ್, ಅರವಿಂದ ಚವಾಣ್, ಬಿಜೆಪಿ ರಾಜ್ಯ ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ರವೀಂದ್ರ ಸಜ್ಜನಶೆಟ್ಟಿ, ತಮ್ಮಣ್ಣ ಡಿಗ್ಗಿ, ನೀಲಕಂಠರಾವ ಪಾಟೀಲ್, ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>