<p><strong>ಜಾಲಹಳ್ಳಿ:</strong> ತಾಲ್ಲೂಕು ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಎಚ್.ಸಿದ್ದಾಪುರ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತಗೊಂಡಿದೆ. ಗ್ರಾಮದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ಇದ್ದರೂ ಅನೇಕ ಯೋಜನೆಗಳು ಜಾರಿಯಾಗದೇ ಗ್ರಾಮ ಕೊಳಗೇರಿಯಂತಾಗಿದೆ ಎಂಬುದು ಗ್ರಾಮಸ್ಥರ ಆರೋಪ. 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಜನರು ವಿವಿಧ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ.</p>.<p>2008–09 ರಲ್ಲಿ ವಿವಿಧ ಆಶ್ರಯ ಯೋಜನೆಯಡಿ 120 ಮನೆಗಳು ಮಂಜೂರಾಗಿದ್ದು, ತಾಲ್ಲೂಕು ಆಡಳಿತ ಮನೆಗಳ ನಿರ್ಮಾಣಕ್ಕೆ 6ಎಕರೆ ಕೃಷಿ ಭೂಮಿಯನ್ನು ₹25ಲಕ್ಷ ನೀಡಿ ಖರೀದಿಸಲಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯ ವರೆಗೆ ಕೇವಲ 53 ಮನೆಗಳು ಮಾತ್ರ ನಿರ್ಮಾಣಗೊಂಡಿವೆ.</p>.<p>‘ಪೂರ್ಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ವರ್ಷಗಳೇ ಕಳೆದರೂ ಫಲಾನುಭವಿಗಳಿಗೆ ವಿತರಣೆ ಮಾಡಿಲ್ಲ. ಈ ಮನೆಗಳು ಸದ್ಯ ಶೌಚಾಲಯಗಳಾಗಿ ಪರಿರ್ವತಗೊಂಡಿವೆ. ಈ ಬಗ್ಗೆ ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ದೂರುತ್ತಾರೆ.</p>.<p>‘50 ಸಾವಿರ ಲೀಟರ್ ನೀರು ಸಂಗ್ರಹದ ನೀರಿನ ಟ್ಯಾಂಕ್ ಬಳಕೆಯಾಗದೆ ಹಾಳುಬಿದ್ದಿದೆ. ಒಂದು ವರ್ಷದ ಹಿಂದೆ ಜಿಲ್ಲಾ ಪಂಚಾಯಿತಿ ವತಿಯಿಂದ ನೀರು ಶುದ್ಧೀಕರಣ ಘಟಕ ನಿರ್ಮಿಸಲಾಗಿದ್ದು, ಉದ್ಘಾಟನೆಗೊಂಡಿಲ್ಲ. ಎಸ್ಟಿಪಿ ಯೋಜನೆ ಅಡಿ ₹80 ಲಕ್ಷ ವೆಚ್ಚದಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಿಸಲಾಗಿದೆ. ರಸ್ತೆ ಪಕ್ಕದಲ್ಲಿ ಚರಂಡಿಗಳು ನಿರ್ಮಿಸಿಲ್ಲ ಹೊಲಸು ನೀರು ರಸ್ತೆಯಲ್ಲಿಯೇ ಸಂಗ್ರಹಗೊಂಡು ಸೊಳ್ಳೆಗಳ ತಾಣವಾಗಿದೆ’ ಎಂದು ಗ್ರಾಮಸ್ಥ ಕೇಚಪ್ಪ ಮಂಡಲಗುಡ್ಡ ಆರೋಪಿಸುತ್ತಾರೆ.</p>.<p>‘2005–06 ರಲ್ಲಿ ಶಿಕ್ಷಣ ಇಲಾಖೆ ₹10 ಲಕ್ಷ ವೆಚ್ಚದಲ್ಲಿ 4 ಕೋಣೆಗಳನ್ನು ನಿರ್ಮಿಸಲಾಗಿದೆ. ಕೋಣೆಗಳು ಕಳಪೆಯಾಗಿದ್ದು, ಇಲ್ಲಿಯವರೆಗೆ ಶಾಲಾ ಶಿಕ್ಷಕರು ಅ ಕೋಣೆಗಳನ್ನು ಬಳಕೆ ಮಾಡಿಕೊಳ್ಳದೇ ಇರುವುದರಿಂದ ಸುತ್ತಲು ಗಿಡಗಂಟಿ ಬೆಳೆದಿವೆ’ ಎಂದು ಅವರು ದೂರುತ್ತಾರೆ.</p>.<p>‘ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ. ಗ್ರಾಮದ ಸುತ್ತಲು ನಾರಾಯಣಪುರ ಬಲದಂಡೆ ಕಾಲುವೆಯ ಬಸಿ ನೀರು ಹಾಗೂ ಭತ್ತದ ಗದ್ದೆಗಳು ಇರುವುದರಿಂದ ಶೌಚಾಲಯ ಇಲ್ಲದೆ ಮಹಿಳೆಯರು ಹಾಗೂ ಪುರುಷರು ಪರದಾಡುವಂತಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ರಾಮಚಂದ್ರಪ್ಪ ನಾಯಕ ಮುರಾಳ ಆರೋಪಿಸಿಸುತ್ತಾರೆ.</p>.<p>ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಸಮರ್ಪಕ ಚರಂಡಿ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ:</strong> ತಾಲ್ಲೂಕು ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಎಚ್.ಸಿದ್ದಾಪುರ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತಗೊಂಡಿದೆ. ಗ್ರಾಮದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ಇದ್ದರೂ ಅನೇಕ ಯೋಜನೆಗಳು ಜಾರಿಯಾಗದೇ ಗ್ರಾಮ ಕೊಳಗೇರಿಯಂತಾಗಿದೆ ಎಂಬುದು ಗ್ರಾಮಸ್ಥರ ಆರೋಪ. 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಜನರು ವಿವಿಧ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ.</p>.<p>2008–09 ರಲ್ಲಿ ವಿವಿಧ ಆಶ್ರಯ ಯೋಜನೆಯಡಿ 120 ಮನೆಗಳು ಮಂಜೂರಾಗಿದ್ದು, ತಾಲ್ಲೂಕು ಆಡಳಿತ ಮನೆಗಳ ನಿರ್ಮಾಣಕ್ಕೆ 6ಎಕರೆ ಕೃಷಿ ಭೂಮಿಯನ್ನು ₹25ಲಕ್ಷ ನೀಡಿ ಖರೀದಿಸಲಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯ ವರೆಗೆ ಕೇವಲ 53 ಮನೆಗಳು ಮಾತ್ರ ನಿರ್ಮಾಣಗೊಂಡಿವೆ.</p>.<p>‘ಪೂರ್ಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ವರ್ಷಗಳೇ ಕಳೆದರೂ ಫಲಾನುಭವಿಗಳಿಗೆ ವಿತರಣೆ ಮಾಡಿಲ್ಲ. ಈ ಮನೆಗಳು ಸದ್ಯ ಶೌಚಾಲಯಗಳಾಗಿ ಪರಿರ್ವತಗೊಂಡಿವೆ. ಈ ಬಗ್ಗೆ ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳ ಹಾಗೂ ಶಾಸಕರ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ದೂರುತ್ತಾರೆ.</p>.<p>‘50 ಸಾವಿರ ಲೀಟರ್ ನೀರು ಸಂಗ್ರಹದ ನೀರಿನ ಟ್ಯಾಂಕ್ ಬಳಕೆಯಾಗದೆ ಹಾಳುಬಿದ್ದಿದೆ. ಒಂದು ವರ್ಷದ ಹಿಂದೆ ಜಿಲ್ಲಾ ಪಂಚಾಯಿತಿ ವತಿಯಿಂದ ನೀರು ಶುದ್ಧೀಕರಣ ಘಟಕ ನಿರ್ಮಿಸಲಾಗಿದ್ದು, ಉದ್ಘಾಟನೆಗೊಂಡಿಲ್ಲ. ಎಸ್ಟಿಪಿ ಯೋಜನೆ ಅಡಿ ₹80 ಲಕ್ಷ ವೆಚ್ಚದಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಿಸಲಾಗಿದೆ. ರಸ್ತೆ ಪಕ್ಕದಲ್ಲಿ ಚರಂಡಿಗಳು ನಿರ್ಮಿಸಿಲ್ಲ ಹೊಲಸು ನೀರು ರಸ್ತೆಯಲ್ಲಿಯೇ ಸಂಗ್ರಹಗೊಂಡು ಸೊಳ್ಳೆಗಳ ತಾಣವಾಗಿದೆ’ ಎಂದು ಗ್ರಾಮಸ್ಥ ಕೇಚಪ್ಪ ಮಂಡಲಗುಡ್ಡ ಆರೋಪಿಸುತ್ತಾರೆ.</p>.<p>‘2005–06 ರಲ್ಲಿ ಶಿಕ್ಷಣ ಇಲಾಖೆ ₹10 ಲಕ್ಷ ವೆಚ್ಚದಲ್ಲಿ 4 ಕೋಣೆಗಳನ್ನು ನಿರ್ಮಿಸಲಾಗಿದೆ. ಕೋಣೆಗಳು ಕಳಪೆಯಾಗಿದ್ದು, ಇಲ್ಲಿಯವರೆಗೆ ಶಾಲಾ ಶಿಕ್ಷಕರು ಅ ಕೋಣೆಗಳನ್ನು ಬಳಕೆ ಮಾಡಿಕೊಳ್ಳದೇ ಇರುವುದರಿಂದ ಸುತ್ತಲು ಗಿಡಗಂಟಿ ಬೆಳೆದಿವೆ’ ಎಂದು ಅವರು ದೂರುತ್ತಾರೆ.</p>.<p>‘ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ. ಗ್ರಾಮದ ಸುತ್ತಲು ನಾರಾಯಣಪುರ ಬಲದಂಡೆ ಕಾಲುವೆಯ ಬಸಿ ನೀರು ಹಾಗೂ ಭತ್ತದ ಗದ್ದೆಗಳು ಇರುವುದರಿಂದ ಶೌಚಾಲಯ ಇಲ್ಲದೆ ಮಹಿಳೆಯರು ಹಾಗೂ ಪುರುಷರು ಪರದಾಡುವಂತಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ರಾಮಚಂದ್ರಪ್ಪ ನಾಯಕ ಮುರಾಳ ಆರೋಪಿಸಿಸುತ್ತಾರೆ.</p>.<p>ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಸಮರ್ಪಕ ಚರಂಡಿ ನಿರ್ಮಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>