ನ್ಯಾಯಮೂರ್ತಿ ಬಿ.ಎ. ಪಾಟೀಲ ಮಾತನಾಡಿ, ‘ಸಸಿಗಳನ್ನು ನೆಡುವ ಜತೆಗೆ ಅವುಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ಪರಿಸರ ಮತ್ತು ಶುದ್ಧ ಗಾಳಿಗೆ ಗಿಡಗಳು ಅವಶ್ಯ. ಅರಳಿಮರಕ್ಕೆ ಪ್ರದಕ್ಷಿಣೆ ಹಾಕಬೇಕು ಎಂದು ಹಿರಿಯರು ಹೇಳುತ್ತಿದ್ದರು. ಅರಳಿಮರ ವಿಶಾಲವಾಗಿ ಬೆಳೆದು ನೆರಳು, ಉತ್ತಮ ಗಾಳಿ ಮತ್ತು ಹೆಚ್ಚು ಆಮ್ಲಜನಕ ಬಿಡುಗಡೆ ಮಾಡುತ್ತದೆ. ಇದರಿಂದ ಮನುಷ್ಯನ ಆರೋಗ್ಯ ಸುಸ್ಥಿಯಲ್ಲಿ ಇರುತ್ತದೆ. ಉತ್ತಮ ಪರಿಸರ ನಿರ್ಮಾಣಕ್ಕೆ ಎಲ್ಲರೂ ನಾಂದಿ ಹಾಡಬೇಕು’ ಎಂದು ಸಲಹೆ ನೀಡಿದರು.