ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನಗಳಾದರೂ ಯಾವೊಬ್ಬ ಸಚಿವರೂ ಜಿಲ್ಲಾ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಲೋಕೋಪಯೋಗಿ, ನೀರಾವರಿ ಯೋಜನೆ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಅಭಿವೃದ್ಧಿಯತ್ತ ಗಮನಹರಿಸದ ಸಮ್ಮಿಶ್ರ ಸರ್ಕಾರ ಕಮಿಷನ್ ಏಜೆಂಟ್ನಂತೆ ವರ್ತಿಸುತ್ತಿದೆ’ ಎಂದು ದೂರಿದರು.