ಕುಂಬಾರಗುಂಡಿ, ಬಿ.ಬಿ. ರಸ್ತೆ, ಮಂಜುನಾಥ ಟಾಕೀಸ್ ರಸ್ತೆ, ಮಹಾಕವಿ ಕಾಳಿದಾಸ ರಸ್ತೆ, ವಿದ್ಯಾನಗರ, ಚಿಕ್ಕಲ್, ಗುರುಪುರ ಬಡಾವಣೆಗಳು ಜಲಾವೃತವಾಗಿವೆ. ರಾಜಾಕಾಲುವೆ ನೀರು ನುಗ್ಗಿದ ಪರಿಣಾಮ ಟ್ಯಾಂಕ್ ಮೊಹಲ್ಲಾ, ಬಾಪೂಜಿ ನಗರದ ಮನೆಗಳಿಗೆ ನೀರು ನುಗ್ಗಿದೆ. ತುಂಗಾ ನಾಲೆ ನೀರು ನುಗ್ಗಿ ಅಶ್ವತ್ಥ ನಗರ, ಎಲ್ಬಿಎಸ್ ನಗರಗಳು ಜಲಾವೃತಗೊಂಡಿವೆ. 7 ಬಡಾವಣೆಗಳ ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ 14 ನೆರೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 2,150 ಜನರಿಗೆ ಆಶ್ರಯ ನೀಡಲಾಗಿದೆ.