ಆಯ್ಕೆ ಪ್ರಕ್ರಿಯೆ ಅಕ್ರಮದಿಂದ ಕೂಡಿದೆ ಎಂದು ಸಿಐಡಿ ತನಿಖಾ ವರದಿ ಸಲ್ಲಿಸಿದ ಕೂಡಲೇ ನೇಮಕಾತಿ ಅಧಿಸೂಚನೆಯನ್ನೇ ರದ್ದುಗೊಳಿಸಿದ್ದ ಸರ್ಕಾರ, ನಂತರ 2016ರ ಅಕ್ಟೋಬರ್ 19ರಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ನಿರ್ದೇಶನದ ಮೇರೆಗೆ ನೇಮಕಾತಿ ಆದೇಶ ನೀಡಿದೆ. ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಇದೀಗ ವಿಶೇಷ ಮೇಲ್ಮನವಿ ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಗೋಯಲ್ ಹೇಳಿದರು.