ಇಂದು ಮಕ್ಕಳ ವರ್ತನೆಗಳು ಬದಲಾಗುತ್ತಿವೆ. ಅವರ ಶೈಕ್ಷಣಿಕ ಸಮಸ್ಯೆ, ವಿದ್ಯಾಭ್ಯಾಸದ ಆಯ್ಕೆ, ಮಾನಸಿಕ, ದೈಹಿಕ ಆರೋಗ್ಯ, ಜೀವನ ಶೈಲಿ ಕುರಿತು ಜಾಗೃತಿ ಮೂಡಿಸಲು ಹಾಗೂ ಮಾರ್ಗದರ್ಶನ ನೀಡಲು ಈ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂದ್ಯಾ ಕಾವೇರಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.