ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆಗೆ ಕಾರ್ಮಿಕ ಬಲಿ

Last Updated 6 ಏಪ್ರಿಲ್ 2020, 14:02 IST
ಅಕ್ಷರ ಗಾತ್ರ

ಕೋಣಂದೂರು: ಸಮೀಪದ ಉಡುಕೆರೆಯ ಬಿ.ಎಸ್. ಸುಬ್ರಹ್ಮಣ್ಯ ಆಚಾರ್ (53) ಮಂಗನ ಕಾಯಿಲೆಯಿಂದ ಸೋಮವಾರ ಮೃತಪಟ್ಟಿದ್ದಾರೆ. ಇದರಿಂದ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಮಲೆನಾಡಿಗರಲ್ಲಿ ಆತಂಕ ಮನೆಮಾಡಿದೆ.

ಮರದ ಕೆಲಸ (ಬಡಗಿ) ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಆಚಾರ್ ಅವರಿಗೆ ಮಾರ್ಚ್ 26ರಿಂದ ಜ್ವರ ಕಾಣಿಸಿಕೊಂಡಿದ್ದು, ರಕ್ತ ಪರೀಕ್ಷೆಯಿಂದ ಮಂಗನಕಾಯಿಲೆ ದೃಢಪಟ್ಟ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT