<p><strong>ಆಗ್ರಾ</strong>: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ ₹2 ಲಕ್ಷ ಬಹುಮಾನ ನೀಡುವುದಾಗಿ ಗೋವಿಂದ ಪರಾಶರ್ ಘೋಷಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ನೂತನ ಸಂಘಟನೆಯಾದ <strong>ಹಿಂದೂ ಹೀ ಆಗೇ </strong>ಆಗ್ರಾ ಘಟಕದ ಮುಖ್ಯಸ್ಥರಾಗಿದ್ದಾರೆ ಗೋವಿಂದ್ ಪರಾಶರ್.</p>.<p>ಸಲ್ಮಾನ್ ಖಾನ್ ಅವರ ಸಿನಿಮಾ ನಿರ್ಮಾಣ ಸಂಸ್ಥೆ <strong>ಲವ್ರಾತ್ರಿ</strong> ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ನವರಾತ್ರಿ ವೇಳೆ ಈ ಚಿತ್ರ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಸಿನಿಮಾಗೆ <strong>ಲವ್ರಾತ್ರಿ</strong> ಎಂಬ ಹೆಸರಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಗೋವಿಂದ್ ದೂರಿದ್ದಾರೆ.</p>.<p>ಪರಾಶರ್ ಮತ್ತು ಅವರ ಸಂಘಟನೆಯ ಕಾರ್ಯಕರ್ತರು ಗುರುವಾರ ಭಗ್ವಾನ್ ಟಾಕೀಸ್ ಬಳಿ ಸಲ್ಮಾನ್ ಖಾನ್ ಅವರ ಪೋಸ್ಟರ್ಗೆ ಬೆಂಕಿ ಹಚ್ಚಿ ಧಿಕ್ಕಾರ ಕೂಗಿದ್ದಾರೆ.</p>.<p>ಅಕ್ಟೋಬರ್ ತಿಂಗಳಲ್ಲಿ ಲವ್ರಾತ್ರಿ ಬಿಡುಗಡೆಯಾಗಲಿದ್ದು, ಈ ಚಿತ್ರದಲ್ಲಿ ಸಲ್ಮಾನ್ ಖಾನ್ ತಂಗಿಯ ಮಗ ಆಯುಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆಯ</p>.<p>ಸಲ್ಮಾನ್ ಖಾನ್ ನಿರ್ಮಿಸುತ್ತಿರುವ ಈ ಚಿತ್ರ ನವರಾತ್ರಿಯನ್ನು ಅವಹೇಳನ ಮಾಡಿದಂತಿದೆ. ಈ ಮೂಲಕ ಲಕ್ಷೋಪಲಕ್ಷ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ರೀತಿಯ ನಡೆಯನ್ನು ನಾವು ಖಂಡಿಸುತ್ತಿದ್ದು, ಈ ಸಿನಿಮಾವನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ನಾವು ತೀವ್ರ ರೀತಿಯಲ್ಲಿ ಪ್ರತಿಭಟಿಸುತ್ತೇವೆ. ಹಿಂದೂ ಭಾವನೆಗಳಿಗೆ ಧಕ್ಕೆ ತರುವುದನ್ನು ನಾವು ಸಹಿಸುವುದಿಲ್ಲ. ಹಾಗಾಗಿಯೇ <strong>ಹಿಂದೂ ಹೀ ಆಗೇ </strong>ಸಂಘಟನೆಯ ಆಗ್ರಾ ಘಟಕ ಅಧ್ಯಕ್ಷನಾದ ನಾನು ಸಲ್ಮಾನ್ ಖಾನ್ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸುವವರಿಗೆ 2 ಲಕ್ಷ ಬಹುಮಾನ ಘೋಷಿಸಿದ್ದೇನೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ</strong>: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ ₹2 ಲಕ್ಷ ಬಹುಮಾನ ನೀಡುವುದಾಗಿ ಗೋವಿಂದ ಪರಾಶರ್ ಘೋಷಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ನೂತನ ಸಂಘಟನೆಯಾದ <strong>ಹಿಂದೂ ಹೀ ಆಗೇ </strong>ಆಗ್ರಾ ಘಟಕದ ಮುಖ್ಯಸ್ಥರಾಗಿದ್ದಾರೆ ಗೋವಿಂದ್ ಪರಾಶರ್.</p>.<p>ಸಲ್ಮಾನ್ ಖಾನ್ ಅವರ ಸಿನಿಮಾ ನಿರ್ಮಾಣ ಸಂಸ್ಥೆ <strong>ಲವ್ರಾತ್ರಿ</strong> ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ನವರಾತ್ರಿ ವೇಳೆ ಈ ಚಿತ್ರ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಸಿನಿಮಾಗೆ <strong>ಲವ್ರಾತ್ರಿ</strong> ಎಂಬ ಹೆಸರಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಗೋವಿಂದ್ ದೂರಿದ್ದಾರೆ.</p>.<p>ಪರಾಶರ್ ಮತ್ತು ಅವರ ಸಂಘಟನೆಯ ಕಾರ್ಯಕರ್ತರು ಗುರುವಾರ ಭಗ್ವಾನ್ ಟಾಕೀಸ್ ಬಳಿ ಸಲ್ಮಾನ್ ಖಾನ್ ಅವರ ಪೋಸ್ಟರ್ಗೆ ಬೆಂಕಿ ಹಚ್ಚಿ ಧಿಕ್ಕಾರ ಕೂಗಿದ್ದಾರೆ.</p>.<p>ಅಕ್ಟೋಬರ್ ತಿಂಗಳಲ್ಲಿ ಲವ್ರಾತ್ರಿ ಬಿಡುಗಡೆಯಾಗಲಿದ್ದು, ಈ ಚಿತ್ರದಲ್ಲಿ ಸಲ್ಮಾನ್ ಖಾನ್ ತಂಗಿಯ ಮಗ ಆಯುಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆಯ</p>.<p>ಸಲ್ಮಾನ್ ಖಾನ್ ನಿರ್ಮಿಸುತ್ತಿರುವ ಈ ಚಿತ್ರ ನವರಾತ್ರಿಯನ್ನು ಅವಹೇಳನ ಮಾಡಿದಂತಿದೆ. ಈ ಮೂಲಕ ಲಕ್ಷೋಪಲಕ್ಷ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ರೀತಿಯ ನಡೆಯನ್ನು ನಾವು ಖಂಡಿಸುತ್ತಿದ್ದು, ಈ ಸಿನಿಮಾವನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ನಾವು ತೀವ್ರ ರೀತಿಯಲ್ಲಿ ಪ್ರತಿಭಟಿಸುತ್ತೇವೆ. ಹಿಂದೂ ಭಾವನೆಗಳಿಗೆ ಧಕ್ಕೆ ತರುವುದನ್ನು ನಾವು ಸಹಿಸುವುದಿಲ್ಲ. ಹಾಗಾಗಿಯೇ <strong>ಹಿಂದೂ ಹೀ ಆಗೇ </strong>ಸಂಘಟನೆಯ ಆಗ್ರಾ ಘಟಕ ಅಧ್ಯಕ್ಷನಾದ ನಾನು ಸಲ್ಮಾನ್ ಖಾನ್ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸುವವರಿಗೆ 2 ಲಕ್ಷ ಬಹುಮಾನ ಘೋಷಿಸಿದ್ದೇನೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>