ಸಲ್ಮಾನ್ ಖಾನ್ ನಿರ್ಮಿಸುತ್ತಿರುವ ಈ ಚಿತ್ರ ನವರಾತ್ರಿಯನ್ನು ಅವಹೇಳನ ಮಾಡಿದಂತಿದೆ. ಈ ಮೂಲಕ ಲಕ್ಷೋಪಲಕ್ಷ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ರೀತಿಯ ನಡೆಯನ್ನು ನಾವು ಖಂಡಿಸುತ್ತಿದ್ದು, ಈ ಸಿನಿಮಾವನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ನಾವು ತೀವ್ರ ರೀತಿಯಲ್ಲಿ ಪ್ರತಿಭಟಿಸುತ್ತೇವೆ. ಹಿಂದೂ ಭಾವನೆಗಳಿಗೆ ಧಕ್ಕೆ ತರುವುದನ್ನು ನಾವು ಸಹಿಸುವುದಿಲ್ಲ. ಹಾಗಾಗಿಯೇ ಹಿಂದೂ ಹೀ ಆಗೇ ಸಂಘಟನೆಯ ಆಗ್ರಾ ಘಟಕ ಅಧ್ಯಕ್ಷನಾದ ನಾನು ಸಲ್ಮಾನ್ ಖಾನ್ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸುವವರಿಗೆ 2 ಲಕ್ಷ ಬಹುಮಾನ ಘೋಷಿಸಿದ್ದೇನೆ ಎಂದಿದ್ದಾರೆ.