ಜಿಲ್ಲೆಯಲ್ಲಿ ಕಾಫಿ ಕೊಯ್ಲಿನ ಕೆಲಸ ಬಿರುಸುಗೊಂಡಿದೆ. ಹವಾಮಾನ ವೈಪರೀತ್ಯದಿಂದಾಗಿ ರೊಬಸ್ಟಾ ಕಾಫಿ ಬೇಗನೇ ಹಣ್ಣಾಗುತ್ತಿದೆ. ಕೂಲಿ ಕಾರ್ಮಿಕರು ಕಾಫಿ ಕೊಯ್ಲಿಗೆ ಉತ್ಸಾಹ ತೋರಿಸುತ್ತಿದ್ದಾರೆ. ಇದರಿಂದ ಭತ್ತದ ಕೊಯ್ಲಿಗೆ ಕಾರ್ಮಿಕರ ಕೊರತೆ ಎದುರಾಗುತ್ತಿದೆ. ಅಲ್ಲದೆ, ಮೋಡ ಕವಿದ ವಾತಾವರಣವೂ ಬೆಳೆಗಾರರನ್ನು ಕಾಡುವಂತೆ ಮಾಡಿದೆ. ಕೊಯ್ಲಿಗೆ ಬಂದಿದ್ದ ಭತ್ತವನ್ನು ಕಟಾವು ಮಾಡಲು ಫಸಲು ಮನೆ ತುಂಬಿಸಿಕೊಳ್ಳುವ ಧಾವಂತದಲ್ಲಿ ಜನರಿದ್ದಾರೆ. ಹೀಗಾಗಿ, ಕಟಾವು ಯಂತ್ರಗಳ ಮೊರೆ ಹೋಗಿದ್ದಾರೆ.