<p>ಸಿದ್ದಾಪುರ: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಬುಧವಾರ ನಡೆಯಿತು.</p>.<p>ಪುಲಿಯೇರಿ, ಗುಹ್ಯ ಗ್ರಾಮದಲ್ಲಿ ಬೀಡುಬಿಟ್ಟ 4 ಮರಿ ಆನೆಗಳು ಸೇರಿದಂತೆ ಸುಮಾರು 8 ಕಾಡಾನೆಗಳನ್ನು ವಿರಾಜಪೇಟೆ ಮುಖ್ಯ ರಸ್ತೆಯ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸುತ್ತ ಕಾಡಿನತ್ತ ಓಡಿಸಿದರು. ಈ ವೇಳೆ ವಾಹನಗಳ ಓಡಾಟವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು. ಮರಿ ಆನೆಗಳು ಸೇರಿದಂತೆ ಕೆಲವು ಕಾಡಾನೆಗಳನ್ನು ಗುಹ್ಯ ಗ್ರಾಮದಿಂದ ಬಜೆಗೊಲ್ಲಿ ಮೂಲಕ ಕಾಡಿಗೆ ಕಳುಹಿಸಲಾಯಿತು.</p>.<p>ಬುಧವಾರದ ಕಾರ್ಯಾಚರಣೆಯಲ್ಲಿ ಸುಮಾರು 20 ಆನೆಗಳನ್ನು ಕಾಡಿಗೆ ಓಡಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಂ ತಿಳಿಸಿದ್ದಾರೆ.</p>.<p>ಗುಹ್ಯ ಗ್ರಾಮದಲ್ಲಿ ಮೂರು ಕಾಡಾನೆಗಳ ಹಿಂಡೊಂದು ಬೀಡುಬಿಟ್ಟಿದ್ದು, ಕಾಡಿಗಟ್ಟಲು ಮುಂದಾದ ಇಲಾಖೆಯ ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾಗಿದೆ. ಸಿಬ್ಬಂದಿ ಹರಸಾಹಸಪಟ್ಟರೂ ಕಾಡಾನೆಗಳು ತೋಟದಿಂದ ಕದಲದೇ ಅಲ್ಲೇ ಬೀಡುಬಿಟ್ಟಿವೆ. ಗುರುವಾರ ಗುಹ್ಯ ಗ್ರಾಮದಲ್ಲಿ ಬಾಕಿ ಇರುವ 3 ಕಾಡಾನೆಗಳನ್ನು ಹಾಗೂ ಕರಡಿಗೋಡು ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಬುಧವಾರ ನಡೆಯಿತು.</p>.<p>ಪುಲಿಯೇರಿ, ಗುಹ್ಯ ಗ್ರಾಮದಲ್ಲಿ ಬೀಡುಬಿಟ್ಟ 4 ಮರಿ ಆನೆಗಳು ಸೇರಿದಂತೆ ಸುಮಾರು 8 ಕಾಡಾನೆಗಳನ್ನು ವಿರಾಜಪೇಟೆ ಮುಖ್ಯ ರಸ್ತೆಯ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸುತ್ತ ಕಾಡಿನತ್ತ ಓಡಿಸಿದರು. ಈ ವೇಳೆ ವಾಹನಗಳ ಓಡಾಟವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು. ಮರಿ ಆನೆಗಳು ಸೇರಿದಂತೆ ಕೆಲವು ಕಾಡಾನೆಗಳನ್ನು ಗುಹ್ಯ ಗ್ರಾಮದಿಂದ ಬಜೆಗೊಲ್ಲಿ ಮೂಲಕ ಕಾಡಿಗೆ ಕಳುಹಿಸಲಾಯಿತು.</p>.<p>ಬುಧವಾರದ ಕಾರ್ಯಾಚರಣೆಯಲ್ಲಿ ಸುಮಾರು 20 ಆನೆಗಳನ್ನು ಕಾಡಿಗೆ ಓಡಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಂ ತಿಳಿಸಿದ್ದಾರೆ.</p>.<p>ಗುಹ್ಯ ಗ್ರಾಮದಲ್ಲಿ ಮೂರು ಕಾಡಾನೆಗಳ ಹಿಂಡೊಂದು ಬೀಡುಬಿಟ್ಟಿದ್ದು, ಕಾಡಿಗಟ್ಟಲು ಮುಂದಾದ ಇಲಾಖೆಯ ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾಗಿದೆ. ಸಿಬ್ಬಂದಿ ಹರಸಾಹಸಪಟ್ಟರೂ ಕಾಡಾನೆಗಳು ತೋಟದಿಂದ ಕದಲದೇ ಅಲ್ಲೇ ಬೀಡುಬಿಟ್ಟಿವೆ. ಗುರುವಾರ ಗುಹ್ಯ ಗ್ರಾಮದಲ್ಲಿ ಬಾಕಿ ಇರುವ 3 ಕಾಡಾನೆಗಳನ್ನು ಹಾಗೂ ಕರಡಿಗೋಡು ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>