ಸರ್ಕಾರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿದ್ದರೂ, ಜಿಲ್ಲೆಯ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಪ್ರವಾಸಿಗರಿಗೆ ವಾಸ್ತವ್ಯ ಒದಗಿಸದೇ ಇರಲು ತೀರ್ಮಾನಿಸಿದ್ದು ಸಂಸ್ಥೆಗಳ ಸದಸ್ಯರು ತೀರ್ಮಾನಕ್ಕೆ ಕೈಜೋಡಿಸುವಂತೆ ಜಿಲ್ಲಾ ಹೋಟೆಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಹಾಗೂ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿ.ಜಿ.ಅನಂತಶಯನ ಮನವಿ ಮಾಡಿದ್ದಾರೆ.