ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದ ಬಳಿಯೇ ಫಲಾನುಭವಿಗಳ ಸಮಾವೇಶ!

Last Updated 18 ಮಾರ್ಚ್ 2023, 7:50 IST
ಅಕ್ಷರ ಗಾತ್ರ

ಮಡಿಕೇರಿ: ದ್ವಿತೀಯ ಪಿಯು ಪರೀಕ್ಷಾ ಕೇಂದ್ರದ ಸಮೀಪದಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಲಿರುವ ಫಲಾನುಭವಿಗಳ ಸಮಾವೇಶ ಏರ್ಪಡಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಸಮಾವೇಶವನ್ನು ತಡವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ. ಆದರೂ ಸಮಾವೇಶದಲ್ಲಿ ಧ್ವನಿವರ್ಧಕದ ಬಳಕೆಯಿಂದ ವಿದ್ಯಾರ್ಥಿಗಳಿಗೆ ಕಿರಿಕಿರಿಯಾಗಿದೆ.
ಸಮಾವೇಶಕ್ಕೆ ಕರೆತರಲು 110 ಕೆಎಸ್ಆರ್ ಟಿಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಪರೀಕ್ಷಾ ಕೇಂದ್ರಕ್ಕೆ ಬರಲೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಡಿಡಿಪಿಯು ಪುಟ್ಟರಾಜು, ಪರೀಕ್ಷಾ ಕೇಂದ್ರದ ಕಿಟಕಿಗಳನ್ನು ಮುಚ್ಚಿ ಪರೀಕ್ಷೆ ನಡೆಸಲಾಗುತ್ತಿದೆ. ಜತೆಗೆ ಸಮಾವೇಶದ ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT