‘ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಮೇ 4ರಂದು ಬಿಜೆಪಿ ಪ್ರಚಾರ ಸಭೆಯಲ್ಲಿ ಕಾರ್ಯಪ್ಪ ಅವರು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತೃತ್ವ ಉಂಟು ಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುವ ಮಾತುಗಳನ್ನಾಡಿದ್ದಾರೆ. ಜತೆಗೆ, ಅವರ ಭಾಷಣವು ಸುಳ್ಳಿನಿಂದ ಕೂಡಿದೆ’ ಎಂದು ಆರೋಪಿಸಿ ಸ್ಥಳದಲ್ಲಿದ್ದ ಕ್ಷಿಪ್ರ ಪರಿಶೀಲನಾ ತಂಡದ ಅಧಿಕಾರಿ ಕುಮಾರಸ್ವಾಮಿ ದೂರು ನೀಡಿದ್ದಾರೆ. ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.