ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳಗೋಡು ಏಕಲವ್ಯ ಶಾಲೆಗೆ ₹ 5 ಕೋಟಿ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್‌

Last Updated 2 ಜನವರಿ 2020, 13:33 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದಲ್ಲಿರುವ ಬುಡಕಟ್ಟು ಇಲಾಖೆ ವ್ಯಾಪ್ತಿಯ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಎಂಆರ್‌ಎಸ್‌) ಕೇಂದ್ರ ಸರ್ಕಾರವು ₹ 15 ಕೋಟಿ ಅನುದಾನ ಮಂಜೂರು ಮಾಡಿದೆ.

ಡಿ.31ರಂದು ಅನುದಾನ ಮಂಜೂರಾತಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಟ್ವೀಟ್‌ ಮಾಡಿದ್ದಾರೆ. ರಾಜ್ಯದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಶಾಲೆಗಳಿಗೆ ತಲಾ ₹ 5 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ವಿರಾಜಪೇಟೆ ತಾಲ್ಲೂಕಿನ ಬಾಳಗೋಡು ಶಾಲೆಗೂ ₹ 5 ಕೋಟಿ ಲಭಿಸಿದೆ.

‘ಸಮುದಾಯದ ಏಳ್ಗೆಯತ್ತ ಮತ್ತೊಂದು ಪುಟ್ಟ ಹೆಜ್ಜೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ’ ಎಂದು ಸಚಿವ ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT