<p><strong>ಸುಂಟಿಕೊಪ್ಪ:</strong> ವಾಹನ ಚಾಲಕರ ಸಂಘದ ವೇದಿಕೆಯ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ₹50 ಲಕ್ಷ ವೆಚ್ಚದಲ್ಲಿ ಚಾವಣಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಮಂತರ್ ಗೌಡ ಹೇಳಿದರು.</p>.<p>ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 55ನೇ ವರ್ಷದ ಸಂಭ್ರಮದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಒಂದು ವೇದಿಕೆಗೆ ಮಾಜಿ ಮುಖ್ಯಮಂತ್ರಿ ಗುಂಡೂರಾಯರು ಹಲವು ಬಾರಿ ಆಗಮಿಸಿ ಸಂತೋಷ ವ್ಯಕ್ತಪಡಿಸಿದ್ದರು. ಅವರ ಹೆಸರು ಉಳಿಯಬೇಕಾದರೆ ಇಂತಹ ಕೆಲಸ ಮಾಡಲೇಬೇಕಾಗುತ್ತದೆ ಎಂದರು.</p>.<p>ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಮಾತನಾಡಿ, ಈ ವೇದಿಕೆಯ ಮೂಲಕ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ ಹಾಗೂ ನಡೆಯಬೇಕಾಗಿದೆ. ಈ ವೇದಿಕೆಯನ್ನು ಬೇಡಿಕೆಯ, ಅಭಿವೃದ್ಧಿಯ ಕೇಂದ್ರ ಎಂಬುದಾಗಿ ಬಣ್ಣಿಸುವುದರಲ್ಲಿ ಅರ್ಥವಿದೆ. ಎಲ್ಲಾ ಧರ್ಮ, ಜಾತಿ, ಜನಾಂಗದವರು ಸೇರಿ ಜಾತ್ಯತೀತತೆಯ ನೆಲೆಗಟ್ಟಿನ ಮೇಲೆ ಆಚರಿಸುವ ಈ ಆಯುಧ ಪೂಜೆ ಎಲ್ಲರ ಆ ಬದುಕಿನಲ್ಲೂ ಬೆಳಕಾಗಲಿ ಎಂದು ಶುಭ ಹಾರೈಸಿದರು.</p>.<p>ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಜಾತಿ ಧರ್ಮವನ್ನು ಬದಿಗಿಟ್ಟು ಆಚರಿಸುವ ಏಕೈಕ ಹಬ್ಬ ಆಯುಧ ಪೂಜೆ. ಕಳೆದ 55 ವರ್ಷಗಳಿಂದ ನಿರಂತರವಾಗಿ ವಾಹನ ಚಾಲಕರ ಸಂಘದವರು ಈ ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ತಮ್ಮ ಕಾಲಾವಧಿಯಲ್ಲಿ ಆಸ್ಪತ್ರೆ, ನೀರಿನ ವ್ಯವಸ್ಥೆ, ಶಾಲಾ ಕಟ್ಟಡ, ಮಾರುಕಟ್ಟೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ಜನರ ಸೇವೆ ಮಾಡಲಾಗಿದೆ. ತಮ್ಮ ಕಾಲಾವಧಿಯಲ್ಲಿ ಮಾರುಕಟ್ಟೆಯ ಸ್ಥಳಾಂತರಕ್ಕೆ ಅನುದಾನವನ್ನು ಕೂಡ ಬಿಡುಗಡೆಗೊಳಿಸಲಾಗಿದ್ದು, ಈ ಬಗ್ಗೆ ಶಾಸಕರು ಗಮನ ಹರಿಸಬೇಕೆಂದು ಮನವಿ ಮಾಡಿಕೊಂಡರು.</p>.<p>ಕನ್ನಡ ಚಲನಚಿತ್ರ ಹಾಸ್ಯ ನಟ ಟೆನ್ನಿಸ್ ಕೃಷ್ಣ ಮಾತನಾಡಿ, ತಮ್ಮ ಜೀವನದಲ್ಲೇ ಇದೇ ಮೊದಲ ಬಾರಿಗೆ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತೋಷ ತಂದಿದೆ. ಕೊಡಗಿನ ಸೋಮವಾರಪೇಟೆಯ ಅಳಿಯನಾಗಿ ಹೇಳುವುದದರೆ ಕೊಡಗಿನ ಸಂಸ್ಕೃತಿ ಅಪರೂಪ ಮತ್ತು ಅದ್ವಿತೀಯ ಎಂದರು.</p>.<p>ಒಕ್ಕಲಿಗ ಗೌಡ ಸಂಘದ ಕಾರ್ಯಧ್ಯಕ್ಷ ಹರಪ್ಪಳ್ಳಿ ರವೀಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಎಂ.ಲತೀಫ್, ಬಿ.ಬಿ.ಭಾರತೀಶ್, ಗಾಮ ಪಂಚಾಯತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿದರು.</p>.<p>ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ವಿ.ಜಿ.ಲೋಕೇಶ್, ಉಪಾಧ್ಯಕ್ಷೆ ಶಿವಮ್ಕ, ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜರ್ಮಿ ಡಿಸೋಜ, ಮುಖಂಡರಾದ ಕ್ಲಾಡಿಯಸ್ ಲೋಬೋ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.</p>.<p>ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಡಿ.ದೇವರಾಜು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಶೈನಿಂಗ್ ಸ್ಟಾರ್ ಮೆಲೋಡಿ ಗೈಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ, ಮಿಮಿಕ್ರಿ ಗೋಪಿ ಮತ್ತು ವಿಕ್ಟರ್ ವಾಸು ತಂಡದಿಂದ ಮಿಮಿಕ್ರಿ ಕಾರ್ಯಕ್ರಮ ಜನಸೂರೆಗೊಂಡಿತು.</p>.<p>ಹಲವಾರು ಸಿನಿಮಾಗಳಲ್ಲಿ ವಾದ್ಯಗೋಷ್ಠಿಯಲ್ಲಿದ್ದ ದೇವ್ ಅವರ ವಾದ್ಯಗೋಷ್ಠಿ ಜನರ ಚಪ್ಪಾಳೆ ಗಿಟ್ಟಿಸಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ವಾಹನ ಚಾಲಕರ ಸಂಘದ ವೇದಿಕೆಯ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ₹50 ಲಕ್ಷ ವೆಚ್ಚದಲ್ಲಿ ಚಾವಣಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಮಂತರ್ ಗೌಡ ಹೇಳಿದರು.</p>.<p>ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 55ನೇ ವರ್ಷದ ಸಂಭ್ರಮದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಒಂದು ವೇದಿಕೆಗೆ ಮಾಜಿ ಮುಖ್ಯಮಂತ್ರಿ ಗುಂಡೂರಾಯರು ಹಲವು ಬಾರಿ ಆಗಮಿಸಿ ಸಂತೋಷ ವ್ಯಕ್ತಪಡಿಸಿದ್ದರು. ಅವರ ಹೆಸರು ಉಳಿಯಬೇಕಾದರೆ ಇಂತಹ ಕೆಲಸ ಮಾಡಲೇಬೇಕಾಗುತ್ತದೆ ಎಂದರು.</p>.<p>ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಮಾತನಾಡಿ, ಈ ವೇದಿಕೆಯ ಮೂಲಕ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ ಹಾಗೂ ನಡೆಯಬೇಕಾಗಿದೆ. ಈ ವೇದಿಕೆಯನ್ನು ಬೇಡಿಕೆಯ, ಅಭಿವೃದ್ಧಿಯ ಕೇಂದ್ರ ಎಂಬುದಾಗಿ ಬಣ್ಣಿಸುವುದರಲ್ಲಿ ಅರ್ಥವಿದೆ. ಎಲ್ಲಾ ಧರ್ಮ, ಜಾತಿ, ಜನಾಂಗದವರು ಸೇರಿ ಜಾತ್ಯತೀತತೆಯ ನೆಲೆಗಟ್ಟಿನ ಮೇಲೆ ಆಚರಿಸುವ ಈ ಆಯುಧ ಪೂಜೆ ಎಲ್ಲರ ಆ ಬದುಕಿನಲ್ಲೂ ಬೆಳಕಾಗಲಿ ಎಂದು ಶುಭ ಹಾರೈಸಿದರು.</p>.<p>ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಜಾತಿ ಧರ್ಮವನ್ನು ಬದಿಗಿಟ್ಟು ಆಚರಿಸುವ ಏಕೈಕ ಹಬ್ಬ ಆಯುಧ ಪೂಜೆ. ಕಳೆದ 55 ವರ್ಷಗಳಿಂದ ನಿರಂತರವಾಗಿ ವಾಹನ ಚಾಲಕರ ಸಂಘದವರು ಈ ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ತಮ್ಮ ಕಾಲಾವಧಿಯಲ್ಲಿ ಆಸ್ಪತ್ರೆ, ನೀರಿನ ವ್ಯವಸ್ಥೆ, ಶಾಲಾ ಕಟ್ಟಡ, ಮಾರುಕಟ್ಟೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ಜನರ ಸೇವೆ ಮಾಡಲಾಗಿದೆ. ತಮ್ಮ ಕಾಲಾವಧಿಯಲ್ಲಿ ಮಾರುಕಟ್ಟೆಯ ಸ್ಥಳಾಂತರಕ್ಕೆ ಅನುದಾನವನ್ನು ಕೂಡ ಬಿಡುಗಡೆಗೊಳಿಸಲಾಗಿದ್ದು, ಈ ಬಗ್ಗೆ ಶಾಸಕರು ಗಮನ ಹರಿಸಬೇಕೆಂದು ಮನವಿ ಮಾಡಿಕೊಂಡರು.</p>.<p>ಕನ್ನಡ ಚಲನಚಿತ್ರ ಹಾಸ್ಯ ನಟ ಟೆನ್ನಿಸ್ ಕೃಷ್ಣ ಮಾತನಾಡಿ, ತಮ್ಮ ಜೀವನದಲ್ಲೇ ಇದೇ ಮೊದಲ ಬಾರಿಗೆ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತೋಷ ತಂದಿದೆ. ಕೊಡಗಿನ ಸೋಮವಾರಪೇಟೆಯ ಅಳಿಯನಾಗಿ ಹೇಳುವುದದರೆ ಕೊಡಗಿನ ಸಂಸ್ಕೃತಿ ಅಪರೂಪ ಮತ್ತು ಅದ್ವಿತೀಯ ಎಂದರು.</p>.<p>ಒಕ್ಕಲಿಗ ಗೌಡ ಸಂಘದ ಕಾರ್ಯಧ್ಯಕ್ಷ ಹರಪ್ಪಳ್ಳಿ ರವೀಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಿ.ಎಂ.ಲತೀಫ್, ಬಿ.ಬಿ.ಭಾರತೀಶ್, ಗಾಮ ಪಂಚಾಯತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿದರು.</p>.<p>ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ವಿ.ಜಿ.ಲೋಕೇಶ್, ಉಪಾಧ್ಯಕ್ಷೆ ಶಿವಮ್ಕ, ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜರ್ಮಿ ಡಿಸೋಜ, ಮುಖಂಡರಾದ ಕ್ಲಾಡಿಯಸ್ ಲೋಬೋ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.</p>.<p>ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಡಿ.ದೇವರಾಜು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಶೈನಿಂಗ್ ಸ್ಟಾರ್ ಮೆಲೋಡಿ ಗೈಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ, ಮಿಮಿಕ್ರಿ ಗೋಪಿ ಮತ್ತು ವಿಕ್ಟರ್ ವಾಸು ತಂಡದಿಂದ ಮಿಮಿಕ್ರಿ ಕಾರ್ಯಕ್ರಮ ಜನಸೂರೆಗೊಂಡಿತು.</p>.<p>ಹಲವಾರು ಸಿನಿಮಾಗಳಲ್ಲಿ ವಾದ್ಯಗೋಷ್ಠಿಯಲ್ಲಿದ್ದ ದೇವ್ ಅವರ ವಾದ್ಯಗೋಷ್ಠಿ ಜನರ ಚಪ್ಪಾಳೆ ಗಿಟ್ಟಿಸಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>