ಕಾವೇರಿ ನೀರಾವರಿ ನಿಗಮ ₹ 70 ಲಕ್ಷ ವೆಚ್ಚದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗುಮ್ಮನಕೊಲ್ಲಿಯಿಂದ ಗೋಪಾಲ್ ಸರ್ಕಲ್ ವರೆಗೆ 2 ಕಿ.ಮೀ ರಸ್ತೆ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿತ್ತು. ಆದರೆ, ರಸ್ತೆ ಡಾಂಬರೀಕರಣಗೊಂಡ ಒಂದೇ ವಾರದಲ್ಲಿ ಜಲ್ಲಿಕಲ್ಲುಗಳು ಮೇಲೆದ್ದಿವೆ. ವಾಹನಗಳ ಚಲಿಸುವಾಗ ರಸ್ತೆಯಲ್ಲಿರುವ ಜಲ್ಲಿ ಕಲ್ಲುಗಳು ಏಳುತ್ತಿವೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ಗ್ರಾಮದ ಮುಖಂಡ ರಾಘವೇಂದ್ರ ದೂರಿದ್ದಾರೆ.